ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವಾಟಾಳ್ ಗೆ ಕನ್ನಡ ಭೂಷಣ ರಾಜ್ಯ ಪ್ರಶಸ್ತಿ
ಈ ಪ್ರಶಸ್ತಿಯನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗುತ್ತಿದ್ದು ಮೊಟ್ಟ ಮೊದಲ ಬಾರಿಗೆ ವಾಟಾಳ್ ಅವರಿಗೆ ನೀಡಲಾಗುತ್ತಿದೆ. ಫೆ.4 ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಂಗಣದಲ್ಲಿ ಪ್ರಶಸ್ತಿ ಪ್ರದಾನ ಮತ್ತು ವಾಟಾಳ್ ಅಭಿನಂದನಾ ಸಮಾರಂಭ ಅದ್ದೂರಿಯಾಗಿ ನೆರವೇರಲಿದೆ. ರಾಜ್ಯ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಮಳೀಮಠ್ ಅಧ್ಯಕ್ಷತೆವಹಿಸಲಿದ್ದಾರೆ.
ಸಮಾರಂಭವನ್ನು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರೆ ಗೌಡ ಉದ್ಘಾಟಿಸಲಿದ್ದಾರೆ. ಖ್ಯಾತ ಸಾಹಿತಿ ಡಾ. ಕಂಬಾರ ವಾಟಾಳ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸಮಾರಂಭದಲ್ಲಿ ಲಲಿತಾ ನಾಯಕ್, ಮುಖ್ಯಮಂತ್ರಿ ಚಂದ್ರು, ಕವಿ ಸಿದ್ದಲಿಂಗಯ್ಯ, ಸಾಹಿತಿ ದೊಡ್ಡರಂಗೇಗೌಡ, ನಲ್ಲೂರು ಪ್ರಸಾದ್, ದಲಿತ ಸಮಿತಿ ಅಧ್ಯಕ್ಷಎನ್. ಮೂರ್ತಿ ಮುಂತಾದವರು ಭಾಗವಹಿಸಲಿದ್ದಾರೆಂದು ಸಂಘದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Comments
ಮೈಸೂರು ಮುಖ್ಯಮಂತ್ರಿ ಚಂದ್ರು ನಲ್ಲೂರ್ ಪ್ರಸಾದ್ ಕನ್ನಡ ಸಾಹಿತ್ಯ ಪರಿಷತ್ nallur prasad siddalingaiah ಅಂಬರೀಶ್ ambareesh ವಾಟಾಳ್ ನಾಗರಾಜ್ vatal nagaraj
Story first published: Wednesday, February 3, 2010, 17:45 [IST]