ಹುಲಿ ಬಂತು ಹುಲಿ ಲೆಕ್ಕ ಹಾಕಿ ಬೇಗ!

ಜನವರಿಯಿಂದ ಹುಲಿಜಾಡು ಹುಡುಕಿಕೊಂಡು ಹೊರಟ ಎರಡು ತಂಡಗಳು ಸುಮಾರು 643 ಕಿ.ಮೀಗಳಷ್ಟು ಅರಣ್ಯ ಪ್ರದೇಶವನ್ನು ಕ್ರಮಿಸಿದರು. ಸುಮಾರು 170 ಕ್ಕೂ ಹೆಚ್ಚು ಪರಿಸರ ಪ್ರೇಮಿ ಸದಸ್ಯರುಗಳು ಸ್ವಯಂಪ್ರೇರಿತರಾಗಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷ. ಕೆಲವರು ಮೊದಲ ಬಾರಿಗೆ ನೈಜವಾದ ಹುಲಿ ನೋಡಿ ಖುಷಿಪಟ್ಟರೆ ಮತ್ತೆ ಕೆಲವರು ಹುಲಿ ಹೆಜ್ಜೆ ನೋಡಿ ತೃಪ್ತಿ ಹೊಂದಿದರು. ಹುಣಸೂರು ಅರಣ್ಯ ವಿಭಾಗದ ಅಧಿಕಾರಿ ವಿಜಯ್ ರಂಜನ್ ಸಿಂಗ್ ಅವರ ನೇತೃತ್ವದಲ್ಲಿ ನಾಗರಹೊಳೆಯಲ್ಲಿ ಗಣತಿ ಕಾರ್ಯ ನಡೆಸಲಾಯಿತು.
ಮನುಷ್ಯರ ವಾಸನೆ ಅರಿತ ಹುಲಿಗಳು ತಮ್ಮ ಪಥ ಬದಲಿಸಿ, ತಂಡಕ್ಕೆ ಸಾಕಷ್ಟು ಬೆವರಿಳಿಸಿದ್ದಂತೂ ಸತ್ಯ. ಹುಲಿ ಗಣತಿ ಜೊತೆಗೆ ಅಕರ್ಷಕ ಗಿಡ ಮರ, ಪಕ್ಷಿ ಪ್ರಾಣಿಗಳ ಬಗ್ಗೆ ಕೂಡ ಮಾಹಿತಿ ಸಂಗ್ರಹ ಮಾಡಲಾಯಿತು. ಲಭ್ಯ ಮಾಹಿತಿಯನ್ನು ದಾಂಡೇಲಿಯ ಅರಣ್ಯ ಇಲಾಖೆಗೆ ನೀಡಲಾಗುತ್ತದೆ. ರಾಜ್ಯದಲ್ಲಿರುವ ಹುಲಿ ಸಂತತಿಯ ನಿಖರ ಅಂಕಿ ಅಂಶ ತಿಳಿಯಲು ಇನ್ನು ತಿಂಗಳಾದರೂ ಕಾಯಬೇಕು. ಸಂತಸದ ಸಂಗತಿಯೆಂದರೆ ಕಳೆದ ಬಾರಿಯ ಗಣತಿಗೆ ಹೋಲಿಸಿದರೆ ನಾಗರಹೊಳೆಯಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ. ಕಳೆದ ವರ್ಷದ ಗಣತಿಯಲ್ಲಿ 65ಹುಲಿಗಳು ಮಾತ್ರ ಕಾಣಿಸಿದ್ದವು.
ಅಂದಾಜು ಎಷ್ಟು ಹುಲಿಗಳಿವೆ?: ಮೂರು ವರ್ಷದ ಕೆಳಗೆ ನಡೆಸಲಾದ ಗಣತಿಯ ಪ್ರಕಾರ ಭಾರತದಲ್ಲಿ ಸುಮಾರು 1,500 ರಿಂದ 1,657 ಹುಲಿಗಳು ಕಂಡುಬಂದಿದ್ದವು.ವಿಶ್ವದೆಲ್ಲೆಡೆ ಸುತ್ತಾಟ ನಡೆಸಿ ಶೋಧಿಸಿದರೂ, ಬೆಂಗಾಲದ 'ರಾಯಲ್' ಹುಲಿ, ಪಟ್ಟೆ ಹುಲಿ, ಬಿಳಿ ಹುಲಿ ಎಲ್ಲವನ್ನು ಒಟ್ಟುಗೂಡಿಸಿದರೂ ನಿಮ್ಮ ಕಣ್ಣಿಗೆ ಕಾಣಸಿಗುವುದು ಕೇವಲ 3,500 ಹುಲಿಗಳು ಮಾತ್ರಎಂದು ವನ್ಯಜೀವಿ ತಜ್ಞರು ಅಭಿಪ್ರಾಯಪಡುತ್ತಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications