ಶೋಭಾಗೆ ಯಾವೂರು ಎಡ್ಡೆ ಮಾರಾಯ್ರೆ?

ಮಂತ್ರಿಮಂಡಲಕ್ಕೆ ಶೋಭಾ ಅವರನ್ನು ಮತ್ತೆ ಕರೆಸಿಕೊಂಡರೆ ಮಂತ್ರಿ ಪದವಿ ಆಕಾಂಕ್ಷಿಗಳು ಮತ್ತು ಹಲವು ಶಾಸಕರುಗಳು ಅಸಮಾಧಾನ- ಗೊಳ್ಳಬಹುದು. ಹಾಗೆ ಮಾಡಿ ಸರ್ಕಾರವನ್ನು ಮತ್ತೆ ಅಸ್ಥಿರಗೊಳಿಸುವ ಬದಲು ಶೋಭಾ ಅವರನ್ನು ಪಕ್ಷದ ಸೇವೆಗೆ ಬಳಸಿಕೊಳ್ಳುವುದು ಉತ್ತಮ ಎಂದು ಸಂಘ ಪರಿವಾರ ಮತ್ತು ಬಿಜೆಪಿ ಪ್ರಮುಖರು ಅನೇಕ ದಿನಗಳಿಂದ ಅಂದುಕೊಳ್ಳುತ್ತಲೇ ಇದ್ದಾರೆ.
ಈ ಚಿಂತನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆಂದೂ ಒಂದು ವರ್ಗ ಹೇಳುತ್ತಿದ್ದರೆ ಶೋಭಾ ಅವರನ್ನು ಕರ್ನಾಟಕ ಸೇವೆಯಿಂದ ಬಿಟ್ಟುಕೊಡಲು ಯಡ್ಡಿ ತಯಾರಿಲ್ಲ ಎಂದು ಇನ್ನೊಂದು ವರ್ಗ ಹೇಳುತ್ತಿದೆ. ಶೋಭಾ ಅವರು ರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸುಸುವುದರ ಮೂಲಕ ರಾಜಕಾರಣದಲ್ಲಿ ಎತ್ತರಕ್ಕೆ ಬೆಳೆಯಬೇಕು ಎಂಬುದು ಕೆಲವರ ನಿಲುವು. ದಿಲ್ಲಿಗೆ ಹೋಗುವುದು ಬೇಡ, ತವರು ಕರ್ನಾಟಕದಲ್ಲೇ ಇರಲಿ ಎಂಬುದು ಅವರ ಅಭಿಮಾನಿಗಳ ಒಲವು.
ಮೂಲತಃ ಸಂಘ ಪರಿವಾರದ ಸಕ್ರಿಯ ಸದಸ್ಯೆಯಾಗಿರುವ ಶೋಭಾ ಅವರಿಗೆ ಸಚಿವ ಸ್ಥಾನ ಕಳೆದುಕೊಂಡ ನಂತರ ಸಾರ್ವಜನಿಕವಾಗಿ ಮತ್ತು ಉನ್ನತ ನಾಯಕರಿಂದ ಸಹಾನುಭೂತಿ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ನಂತರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಪುನಃ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತೂ ಕೇಳಿ ಬಂದಿತ್ತು.
ಅದೇನೇ ಇರಲಿ, ಸಚಿವ ಸ್ಥಾನ ಕಳೆದುಕೊಂಡ ನಂತರ ಶೋಭಾ ಅವರು ಅಧಿಕಾರ ರಾಜಕೀಯದ ಆಸೆಯನ್ನು ಪ್ರಕಟಿಸುವ ಒಂದೇ ಒಂದು ಮಾತನ್ನೂ ಆಡದಿರುವುದು ಅವರ ವ್ಯಕ್ತಿ ವರ್ಚಸ್ಸಿಗೆ ಮತ್ತು ರಾಜಕೀಯ ಭವಿಷ್ಯಕ್ಕೆ ಶುಭಸೂಚನೇಯೇ ಆಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications