ಕೆಎಂಎಫ್ ಹಾಲು, ತೈಲ ದರ ಏರಿಕೆ ?

ಕೆಎಂಎಫ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ, ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ನೀಡಿದ್ದಾರೆ. ಪ್ರತಿ ಲೀಟರ್ ಗೆ 3 ರಿಂದ 4 ರುಪಾಯಿ ಏರಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಮೌಖಿಕ ಒಪ್ಪಿಗೆ ನೀಡಿದ್ದಾರೆಯೇ ಹೊರತು ಅಧಿಕೃತ ಒಪ್ಪಿಗೆ ಸೂಚಿಸಿಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿಗಳು ಒಪ್ಪಿಗೆ ನೀಡುವ ವಿಶ್ವಾಸ ತಮಗಿದ್ದು, ಸದ್ಯದಲ್ಲಿಯೇ ಆಡಳಿತ ಮಂಡಳಿಯ ಜೊತೆ ಚರ್ಚೆ ನಡೆಸಿ ಪ್ರತಿ ಲೀಟರ್ ಗೆ 3 ರಿಂದ 4 ರುಪಾಯಿ ಹೆಚ್ಚಿಸುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು. ರಾಜ್ಯದಲ್ಲಿ ಪ್ರತಿ ದಿನ 40 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಇನ್ನು ಒಂದೂವರೆ ಲಕ್ಷ ಹೆಚ್ಚುವರಿ ಹಾಲು ಉತ್ಪಾದನೆಯಾಗುತ್ತಿದೆ.
ಹಾಲಿನ ದರ ಹೆಚ್ಚಳದ ಲಾಭಾಂಶದಲ್ಲಿ ಶೇ.80 ರಿಂದ 85 ಹಣವನ್ನು ರೈತರಿಗೆ ಕೊಡಲಾಗುತ್ತಿದೆ. ಅಂದರೆ ಈಗಿನ ಲಾಭಾಂಶದಲ್ಲಿ ಪ್ರತಿಯೊಬ್ಬ ರೈತನಿಗೆ 2 ರಿಂದ 2.50 ರುಪಾಯಿ ಲಾಭ ಕೊಡುತ್ತೇವೆ. ಉಳಿದ ಲಾಭಾಂಶವನ್ನು ರೈತರ ಕ್ಷೇಮಾಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ ಎಂದು ರೆಡ್ಡಿ ವಿವರಿಸಿದರು.
ಸೀಮೆಎಣ್ಣೆ, ಅಡುಗೆ ಅನಿಲ ಬೆಲೆ ಏರಿಕೆ
ತೈಲ ಬೆಲೆ ಏರಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಯುಪಿಎ ಸರಕಾರ ಅಂಗ ಪಕ್ಷಗಳ ಜೊತೆ ಚರ್ಚೆ ಆರಂಭಿಸಿದೆ. ಕೇಂದ್ರ ದ ಇಂಧನ ಸಚಿವ ದಿಯೋರಾ ಅವರು ಸಂಪರ್ಕ ಖಾತೆ ಸಚಿವ ಹಾಗೂ ಡಿಎಂಕೆ ಮುಖಂಡ ಎ ರಾಜಾ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಇಂದು ಸಂಜೆ ಕಾಂಗ್ರೆಸ್ ಕೋರ್ ಕಮೀಟಿ ಸಭೆ ನಡೆಯಲಿದ್ದು, ತೈಲ ಬೆಲೆ ಹೆಚ್ಚಿಸುವಂತೆ ಶಿಪಾರಸ್ಸು ಮಾಡಿರುವ ಕಿರಿತಿ ಪಾರೀಖ್ ಕಮೀಟಿಯ ಅಂಶಗಳನ್ನು ಸಹ ಚರ್ಚಿಸುವ ಸಾಧ್ಯತೆ ಇದೆ.
ಸಮಿತಿಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರಗಳು ಯಾಥಾಸ್ಥಿತಿಯಲ್ಲಿ ಮುಂದುವರೆಯಲಿವೆ. ಆದರೆ, ಸೀಮೆಎಣ್ಣೆ ಮತ್ತು ಎಲ್ ಪಿಜಿ ಗ್ಯಾಸ್ ದರವನ್ನು ಕ್ರಮವಾಗಿ 6 ಮತ್ತು 100 ರುಪಾಯಿ ಏರಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದೆ. ಸಮಿತಿ ಮಾಡಿರುವ ಶಿಫಾರಸ್ಸಿನ ಅರ್ಧದಷ್ಟಾದರೂ ದರ ಏರಿಕೆ ಮಾಡಬೇಕು ಎಂದು ಸರಕಾರ ತೀರ್ಮಾನಿಸಿದೆ ಎನ್ನಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications