ಕೃಷಿ ಭೂಸ್ವಾಧೀನಕ್ಕೆ ವಿರೋಧಿಸಿ ಹೋರಾಟ

HD Devegowda
ಬೆಂಗಳೂರು, ಫೆ. 10 : ನೈಸ್ ವಿರುದ್ಧ ಉಗ್ರ ಪ್ರತಿಭಟನೆಗೆ ಇಳಿದಿದ್ದ ಮಾಜಿ ಪ್ರಧಾನಮಂತ್ರಿ ದೇವೇಗೌಡ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಸರಕಾರ ರೈತರ ಜಮೀನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ರೈತರನ್ನು ಎಚ್ಚರಿಸಲು ಮುಂದಾಗಿದ್ದಾರೆ. ಗೌಡರ ಹೋರಾಟಕ್ಕೆ ಎಡಪಕ್ಷಗಳು ಕೈಜೋಡಿಸಿದ್ದು, ಹೋರಾಟದ ತೀವ್ರತೆಯ ಮತ್ತಷ್ಟು ಬಲಗೊಂಡಂತಾಗಿದೆ.

ನಗರದದಲ್ಲಿ ಬುಧವಾರ ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ದೇವೇಗೌಡ, ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ಸರಕಾರ ರೈತರ ಅಮೂಲ್ಯ ಜಮೀನನ್ನು ವಶಪಡಿಸಿಕೊಳ್ಳುತ್ತಿದೆ. ಸರಕಾರ ಈ ರೈತ ವಿರೋಧಿ ಕ್ರಮ ವಿರೋಧಿಸಿ ಒಂದು ವಾರಗಳ ಕಾಲ ರಾಜ್ಯಾಧ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಪಶ್ಚಿಮ ಬಂಗಾಲದ ಸಿಂಗೂರಿನಲ್ಲಿ ಟಾಟಾ ಕಂಪನಿ ವಿರುದ್ಧ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ನಡೆಸಿದ ಹೋರಾಟದ ಮಾದರಿಯಲ್ಲೇ ಭೂಸ್ವಾಧೀನ ಪ್ರಕ್ರಿಯೆನ್ನು ವಿರೋಧಿಸಲಾಗುವುದು ಎಂದು ಗೌಡರು ಎಚ್ಚರಿಕೆ ನೀಡಿದ್ದಾರೆ.

ರಾಮನಗರ, ತುಮಕೂರು, ಧಾರವಾಡ ಮತ್ತು ಮೈಸೂರು ನಗರದಲ್ಲಿ ಸುಮಾರು 1.71 ಲಕ್ಷ ಎಕರೆ ಭೂಮಿಯನ್ನು ಸರಕಾರ ವಶಪಡಿಸಿಕೊಳ್ಳಲು ಸರಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಸರಕಾರ ಗುರುತಿಸಿರುವ ಭೂಮಿ ರೈತರ ಜೀವನಾಡಿಯಾಗಿರುವ ಭೂಮಿಯಾಗಿದೆ. ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಯಾವ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಜೆಡಿಎಸ್ ಅಭಿವೃದ್ಧಿ ವಿರೋಧಿಯಲ್ಲ. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಭೂಮಿಯನ್ನು ಮಾತ್ರ ವಶಪಡಿಸಿಕೊಳ್ಳಬೇಕು. ಸರಕಾರದ ಭೂಸ್ವಾಧೀನ ವಿರೋಧಿಸಿ ಫೆ.16 ರಿಂದ ಒಂದು ವಾರ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರನ್ನು ಎಚ್ಚರಿಸಲಾಗುವುದು ಎಂದು ದೇವೇಗೌಡ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+