ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋಹತ್ಯೆ ನಿಷೇಧ ಬೇಡ, ದೇವೇಗೌಡ

By Mrutyunjaya Kalmat
|
Google Oneindia Kannada News

HD Devegowda
ಬೆಂಗಳೂರು, ಫೆ. 11 : ಗೋಮಾಂಸವನ್ನು ಬರೀ ಮುಸಲ್ಮಾನರು ಮಾತ್ರ ತಿನ್ನುತ್ತಿಲ್ಲ. ದಲಿತ, ಹಿಂದುಳಿದ ಮತ್ತು ಕ್ರೈಸ್ತ ಜನಾಂಗದ ಜನರೂ ತಿನ್ನುತ್ತಿದ್ದಾರೆ. ಗೋ ಹತ್ಯೆ ನಿಷೇಧದಿಂದ ದೊಡ್ಡ ಅನಾಹುತ ಸಂಭವಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಂತ ಕೆಲಸಕ್ಕೆ ಸರಕಾರ ಕೈಹಾಕಬಾರದು. ಇದೊಂದು ಅಪಾಯಕಾರಿ ನಿರ್ಧಾರ. ಸರಕಾರ ಆತುರದ ನಿರ್ಧಾರ ತೆಗೆದುಕೊಳ್ಳಬಾರದು. ಇದರಿಂದ ಚರ್ಮೋಧ್ಯಮಕ್ಕೂ ಹೊಡೆತ ಬೀಳಲಿದೆ ಎಂದು ದೇವೇಗೌಡ ಹೇಳಿಕೆ ನೀಡಿದ್ದಾರೆ.

ತನ್ನ ಸಂಖ್ಯಾಬಲದಿಂದ ಬಿಜೆಪಿ ಈ ಕಾಯ್ದೆ ಜಾರಿಗೆ ತಂದರೂ ರಾಜ್ಯಪಾಲ ಭಾರದ್ವಾಜ್ ಅವರು ಈ ವಿವಾದಕಾರಿ ಕಾಯ್ದೆಗೆ ಅಂಕಿತ ಹಾಕಬಾರದೆಂದು ಅವರು ಆಗ್ರಹಿಸಿದ್ದಾರೆ. 'ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣೆ' ಮಸೂದೆ ತಿದ್ದುಪಡಿ ವಿಧೇಯಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿತ್ತು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X