ಮಾ.30ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ
ಬೆಂಗಳೂರು,
ಫೆ. 11 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮಾರ್ಚ್ 30ರೊಳಗೆ ನಡೆಸಬೇಕು ಎಂದು ರಾಜ್ಯ ಹೈಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ. ವಿವಿಧ ಕಾರಣಗಳನ್ನು ನೀಡಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಿದ್ದ ಸರಕಾರಕ್ಕೆ ಮುಖಭಂಗವಾಗಿದೆ. id="toptextpromo">ಹೈಕೋರ್ಟ್
ವಿಭಾಗೀಯ ಪೀಠದ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ನೇತೃತ್ವದ ನ್ಯಾಯಪೀಠ ಮಾರ್ಚ್ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸೂಚಿಸಿದೆ. ಜೊತೆಗೆ ಫೆಬ್ರವರಿ 20ರೊಳಗೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು ಮತ್ತು ಫೆಬ್ರವರಿ 22 ರಂದು ಚುನಾವಣೆ ದಿನಾಂಕಗಳನ್ನು ಪ್ರಕಟಿಸುವಂತೆ ರಾಜ್ಯ ಚುನಾವಣೆ ಆಯೋಗಕ್ಕೆ ತಿಳಿಸಿದೆ. ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಬೇಕಿರುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಹ ನ್ಯಾಯಾಲಯ ಬಿಬಿಎಂಪಿಗೆ ಆದೇಶ ನೀಡಿದೆ. id='are-slot-1' class='oiad oi-axt oiadv'> id='top-searched-articles'>ಮೀಸಲಾತಿ
ಪಟ್ಟಿ ಪರಿಷ್ಕರಣೆ, ವಾರ್ಡ್ ಗಳ ಪುನರ್ ವಿಂಗಡಣೆ ಸೇರಿದಂತೆ ವಿವಿಧ ಕಾರಣಗಳನ್ನೊಡ್ಡಿ ಆರು ತಿಂಗಳ ಕಾಲ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರಕಾರ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿತ್ತು. ಆದರೆ, ಸರಕಾರದ ಮನವಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿರುವ ನ್ಯಾಯಾಲಯ ಮಾರ್ಚ್ 30ರೊಳಗೆ ಚುನಾವಣೆ ನಡೆಸುವಂತೆ ಆದೇಶಿಸಿದೆ. ಇದರೊಂದಿಗೆ ಬಿಬಿಎಂಪಿ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಟ್ಟಂತಾಗಿದೆ.











Click it and Unblock the Notifications