ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆ ಎಚ್ ಪಾಟೀಲ್ ಪ್ರತಿಮೆಗೆ ಚಪ್ಪಲಿಹಾರ?

By Mahesh
|
Google Oneindia Kannada News

KH Patil, (file photo)
ಗದಗ, ಫೆ. 12 : ಸಹಕಾರಿ ರಂಗದ ಬೀಷ್ಮ ಎಂದೇ ಹೆಸರಾಗಿರುವ ಕಾಂಗ್ರೆಸ್ ಧುರೀಣ ದಿವಂಗತ ಕೆ ಎಚ್ ಪಾಟೀಲ್ ಅವರ ಪ್ರತಿಮೆಗೆ ಚಪ್ಪಲಿಹಾರ ಹಾಕಿ ಅವಮಾನ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಗದಗ ಮತ್ತು ಹುಲಕೋಟಿ ಹಾಗೂ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಲಕೋಟಿಯಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.

ಗದಗ ಮತ್ತು ಹುಲಕೋಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ಆರಂಭಿಸಿದ್ದು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಗುರುವಾರ ಸಂಜೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿದ್ದಕ್ಕೆ ಪ್ರತಿಯಾಗಿ ಸೇನೆ ಕಾರ್ಯಕರ್ತರು ಕೆ ಎಚ್ ಪಾಟೀಲ್ ಅವರ ಪ್ರತಿಮೆಗೆ ಚಪ್ಪಲಿಹಾರ ಹಾಕಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಕೂಡಲೇ ಸೇನೆ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಆರಂಭವಾಗಿದ್ದು, ಹೆಚ್ಚಿನ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X