ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಟಿ ಬದನೆ ನಿಷೇಧಕ್ಕೆ ಕಿರಣ್ ಅಸಮಾಧಾನ
ಕಳೆದ ಬುಧವಾರ ಕೇಂದ್ರ ಪರಿಸರ ಖಾತೆ ಸಚಿವ ಜೈರಾಮ್ ರಮೇಶ್ ಅವರು ಬಿಟಿ ಬದನೆಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಭಾರತದಲ್ಲಿ ಬಿಟಿ ಬದನೆಗೆ ಅವಕಾಶವಿಲ್ಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸರಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಿರಣ್ ಮುಜಮ್ ದಾರ್ ಶಾ ಅವರು, ಸರಕಾರ ಕೆಲ ಸರಕಾರೇತರ ಸಂಸ್ಥೆಗಳ ಮತ್ತು ಪರಿಸರವಾದಿಗಳ ಒತ್ತಡಕ್ಕೆ ಮಣಿದು ಬಿಟಿ ಬದನೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿದೆ. ಸರಕಾರದ ಈ ನಿರ್ಧಾರ ಬಿಟಿ ಕಂಪನಿಗಳಿಗೆ ಮಾರಕವಾಗುವುದರಲ್ಲಿ ಸಂಶಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಟಿ ಹತ್ತಿಗೂ ಆರಂಭದಲ್ಲಿ ಭಾರಿ ವಿರೋಧ ವ್ಯಕ್ತವಾಯಿತು. ನಂತರ ಎಲ್ಲವೂ ಸುಲಲಿತವಾಯಿತು. ಇಂತಹ ನಿರ್ಧಾರಗಳನ್ನು ಕೈಗೊಳ್ಳುವಾಗ ಪರ ವಿರೋಧಗಳು ಸಹಜ. ಆದರೆ, ಸರಕಾರ ಈ ವಿಷಯದಲ್ಲಿ ಆತುರದ ನಿರ್ಧಾರ ಕೈಗೊಂಡಿದ್ದು ಮಾತ್ರ ಸತ್ಯ. ಮುಂದಿನ ದಿನಗಳಲ್ಲಾದರೂ ಬಿಟಿ ಬದನೆಯ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ.
Comments
Story first published: Wednesday, May 19, 2010, 16:51 [IST]