ಬಂದ್ ಹಿಂದೆ ವಿರೋಧಿಗಳ ಪಿತೂರಿ : ಬಿಎಸ್ ವೈ

ರಾಜ್ಯದ ಆಸ್ತಿಪಾಸ್ತಿ ಹಾನಿ ಮಾಡುವ ಗಲಭೆಕೋರರನ್ನು ಮುಲಾಜಿಲ್ಲದೆ ಬಂಧಿಸಿ ಎಂದು ಪೊಲೀಸ್ ಇಲಾಖೆಗೆ ಯಡಿಯೂರಪ್ಪ ಆದೇಶಿಸಿದ್ದಾರೆ. ಯಾವುದೇ ಕಾರಣಕ್ಕೂ ಬಂದ್ ಯಶಸ್ವಿಯಾಗಲು ಬಿಡುವುದಿಲ್ಲ. ಉತ್ತಮ ಆಡಳಿತ ನೀಡುತ್ತಿರುವ ಬಿಜೆಪಿ ಸರಕಾರಕ್ಕೆ ಕೆಟ್ಟ ಹೆಸರು ತರಲೆಂದೇ ವಿರೋಧಿಗಳು ಬಂದ್ ಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ಸಿಟ್ಟು ಹೊರಹಾಕಿದರು.
ಶನಿವಾರ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಪ್ರೇಮಯುದ್ಧ ಎಂಬ ಸಂವಾದದಲ್ಲಿ ಶ್ರೀರಾಮಸೇನೆ ನಾಯಕ ಪ್ರಮೋದ್ ಮುತಾಲಿಕ್ ಮುಖಕ್ಕೆ ಇಬ್ಬರು ಯುವಕರು ಮಸಿ ಬಳಿದಿದ್ದರು ಮತ್ತು ಅವರಿಬ್ಬರು ಕಾಂಗ್ರೆಸ್ ಯುವ ಕಾರ್ಯಕರ್ತರು ಎಂಬ ಅಂಶ ಬೆಳಕಿಗೆ ಬಂದಿತ್ತು. ಪ್ರಮೋದ್ ನೀಡಿರುವ ಬಂದ್ ಕರೆಯ ಹಿಂದೆ ವಿರೋಧ ಪಕ್ಷದ ಪಿತೂರಿ ಇದೆ ಎಂದು ಯಡಿಯೂರಪ್ಪ ಆರೋಪಿಸಿದರು.
ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ತೋರಿಸುವುದು ವಿರೋಧಿಗಳಿಗೆ ಬೇಕಾಗಿದೆ. ಹಿಂದೆ ಚರ್ಚ್ ದಾಳಿ ನಡೆದಾಗಲೂ ಇದೇ ರೀತಿ ಪಿತೂರಿ ನಡೆದಿತ್ತು ಎಂದು ಅವರು ದೂರಿದರು. ಬಜೆಟ್ ಮಂಡನೆ ಸನ್ನಿಹಿತವಾಗಿರುವುದರಿಂದ ಬಿಜೆಪಿಗೆ ಕೆಟ್ಟ ಹೆಸರು ತರುವುದೇ ವಿರೋಧಿಗಳ ಉದ್ದೇಶ ಎಂದು ಅವರು ಕಿಡಿಕಾರಿದರು.
ಸೇನೆ ಕಾರ್ಯಕರ್ತರ ಬಂಧನ : ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುನ್ನೆಚ್ಚರಿಕೆಯಾಗಿ 300ಕ್ಕೂ ಹೆಚ್ಚು ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಡಿಜಿಪಿ ಅಜಯಕುಮಾರ್ ಸಿಂಗ್ ಹೇಳಿದ್ದಾರೆ. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಬಂದ್ ಗೆ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಿಲಾಗಿದೆ. ಮಂಗಳೂರು, ಉಡುಪಿ ಮತ್ತು ಬಾಗಲಕೋಟೆ ಹೊರತುಪಡಿಸಿದರೆ ಬಂದ್ ಹೆಚ್ಚೂಕಡಿಮೆ ಶಾಂತಯುತವಾಗಿದೆ. ಮುತಾಲಿಕ್ ತವರೂರಾದ ಬೆಳಗಾವಿಯಲ್ಲಿಯೂ ಬಂದ್ ಶಾಂತಿಯುತವಾಗಿದೆ.
ಹುಬ್ಬಳ್ಳಿಯಲ್ಲಿ ಬಿಗಿ ಬೇದೋಬಸ್ತ್ : ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಹುಬ್ಬಳ್ಳಿಯಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿಯಲ್ಲಿ 48 ಸೇನೆ ಕಾರ್ಯಕರ್ತರನ್ನು ಬಂದಿಸಲಾಗಿದೆ. ಫೆಬ್ರವರಿ 15ರವರೆಗೆ ಗಲಭೆ ನಡೆಸಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಆಯುಕ್ತ ಔರಾದಕರ್ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications