ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮಸೇನೆ ಗೂಂಡಾಗಿರಿಗೆ ಸಿದ್ದು ಕಿಡಿ

By Mrutyunjaya Kalmat
|
Google Oneindia Kannada News

Chop off arms of Bajrang Dal, VHP or resign: Siddaramaiah
ಬೆಂಗಳೂರು, ಫೆ. 14 : ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಸಂಘ ಪರಿವಾರದ ಅಂಗಸಂಸ್ಥೆಗಳು ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಳ್ಳುವುದು ಹೆಚ್ಚಾಗಿದ್ದರೂ ಸರಕಾರ ಮೌನವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸಮಾರಂಭವೊಂದರಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಸೇನೆ ಪ್ರೇಮಿಗಳ ದಿನಾಚರಣೆ ವಿರೋಧಿಸುವ ಹೆಸರಿನಲ್ಲಿ ಗೊಂಡಾಗಿರಿ ನಡೆಸುತ್ತಿದೆ. ಆದರೆ, ಅವರ ವಿರುದ್ಧ ಕ್ರಮಕೈಗೊಳ್ಳಲು ಸರಕಾರ ಮೀನಮೇಷ ಎಣಿಸುತ್ತಿದೆ ಎಂದು ಹರಿಹಾಯ್ದರು. ಸಂಘ ಪರಿವಾರದ ಸಂಘಟನೆಗಳಿಗೆ ಈ ಸರಕಾರ ಅವಧಿಯಲ್ಲಿ ಏನು ಬೇಕಾದರೂ ಮಾಡಬಹುದು ಎಂಬ ಭಾವನೆ ಬೆಳೆದುಬಿಟ್ಟಿದೆ. ಇದಕ್ಕೆ ಸರಕಾರವೂ ಸೌಮ್ಯ ಧೋರಣೆ ತಾಳಿದ್ದು ಕಾರಣವಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X