ಪುಣೆ ಸ್ಫೋಟ: ಭದ್ರತಾ ವೈಫಲ್ಯವಿಲ್ಲ, ಚಿದಂಬರಂ

ಶನಿವಾರ ನಡೆದ ಪ್ರಬಲ ಬಾಂಬ್ ಸ್ಫೋಟಕ್ಕೆ ಕನಿಷ್ಠ ಒಂಬತ್ತು ಮಂದಿ ಸಾವಪ್ಪಿದ್ದು 33 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಿ ಚಿದಂಬರಂ, ಬಾಂಬ್ ಸ್ಫೋಟ ಘಟನೆ ನಡೆದದ್ದು ದುರದೃಷ್ಟಕರ ಸಂಗತಿ. ಆದರೆ ಇದರಲ್ಲಿ ಯಾವುದೇ ಭದ್ರತಾ ವೈಫಲ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಭದ್ರತಾ ವೈಫಲ್ಯ ಇದೆಯೇ ಇಲ್ಲವೆ ಎಂಬ ಅಂಶ ತನಿಖೆಯಿಂದ ದೃಢಪಡುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ತಿಳಿಸಿದರು. ಮೃತರ ಕುಟುಂಬಕ್ಕೆ ತಲಾ ರು.5 ಲಕ್ಷ ಪರಿಹಾರ ಧನ ನೀಡುತ್ತಿರುವುದಾಗಿ ಸರಕಾರ ಘೋಷಿಸಿದೆ.











Click it and Unblock the Notifications