ಲಂಚಾವತಾರಿ ಅಧಿಕಾರಿಗೆ ಸಾರ್ವಜನಿಕರ ಗೂಸಾ

ಕರ್ತವ್ಯ ಲೋಪದ ಮೇಲೆ ಜಿಲ್ಲಾಧಿಕಾರಿ ಚಂದ್ರಶೇಖರಯ್ಯ ಈಗಾಗಲೇ ಶಿರಸ್ತೇದಾರ್ ಅಮಾನತ್ತಿಗೆ ಶಿಫಾರಸ್ಸು ಮಾಡಿದ್ದರೂ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದುದನ್ನು ಕಂಡ ಸಾರ್ವಜನಿಕರು ಲಂಚಾವತಾರಿ ಅಧಿಕಾರಿಗೆ ಧರ್ಮದೇಟು ನೀಡಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿಯ ತಾಲ್ಲೂಕ್ ಕಛೇರಿಯಲ್ಲಿ ಕಳೆದ 2 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಹಕ್ಕುದಾಖಲೆ ಶಿರಸ್ತೇದಾರ್ ಪ್ರಸನ್ನಕುಮಾರ್ ಮೊದಲಿನಿಂದಲೂ ಒಂದಲ್ಲಾ ಒಂದು ವಿವಾದದ ಕೇಂದ್ರ ಬಿಂದುವಾಗಿದ್ದವರೆ. ಗ್ರಾಮಪಂಚಾಯಿತಿ ಮೀಸಲು ಪಟ್ಟಿಯನ್ನು ಗೆಜೆಟ್ ಪ್ರಕಟಿಸುವ ಮುನ್ನವೇ ತಮಗಿಷ್ಟ ಬಂದವರಿಗೆ ನೀಡಿದ್ದಾರೆಂಬುದು ಅವರು ವಿರುದ್ಧದ ದೂರು.
ಕಂದಾಯ ಇಲಾಖಾ ನೌಕರರಾಗಿರುವ ಈಪ್ರಸನ್ನಕುಮಾರ್ ಹಕ್ಕು ಮತ್ತು ದಾಖಲೆ ಪತ್ರಗಳನ್ನು ನೀಡಲು ಮೊದಲಿನಿಂದಲೂ ಸಾರ್ವಜನಿಕರನ್ನ ಸತಾಯಿಸುತ್ತಲೇ ಇರುತ್ತಿದ್ದರು. ಟೇಬಲ್ ಕೆಳಗಿನ ವ್ಯವಹಾರವನ್ನೇ ಹೆಚ್ಚಾಗಿ ಮಾಡುತ್ತಿದ್ದ ಈ ಪ್ರಸನ್ನಕುಮಾರ್ ಬಗ್ಗೆ ಆಕ್ರೋಶ ಮನೆಮಾಡಿತ್ತು. ಗ್ರಾ.ಪಂ. ಮೀಸಲು ಪಟ್ಟಿಯಲ್ಲು ಹಣ ಪಡೆದು ವೈಟ್ನರ್ ಬಳಸಿ ತಮಗಿಷ್ಟ ಬಂದ ರೀತಿಯಲ್ಲಿ ಮೀಸಲು ಪಟ್ಟಿಯನ್ನೇ ತಿರುಚಿದ್ದಾರೆಂದು ಸ್ಥಳೀಯ ಮುಖಂಡ ಹುಲಿಕಟ್ಟೆ ಅಶೋಕ್ ಆರೋಪಿಸಿದ್ದಾರೆ.
ಈ ಶಿರಸ್ತೇದಾರ್ರ ಹಣದ ಹಪಾಹಪಿಯಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೇ ಇಂದಿಗೂ ತಾಲ್ಲೂಕ್ ಕಛೇರಿಯಲ್ಲಿ ಹಾಗೆ ಉಳಿದಿವೆ. ಲಂಚಾವತಾರಿ ಅಧಿಕಾರಿಯ ಬಗ್ಗೆ ಮನೆ ಮಾಡಿದ್ದ ಆಕ್ರೋಶ ಸ್ಪೋಟಗೊಂಡಿದ್ದರಿಂದ ಸಾರ್ವಜನಿಕರೆಲ್ಲರು ಸೇರಿ ಕಛೇರಿ ಆವರಣದಲ್ಲೇ ಗೂಸಾ ನೀಡಿದರು.
ಈತನ ಲಂಚಗುಳಿತನದ ಬಗ್ಗೆ ದೂರುಗಳು ಹೆಚ್ಚಾಗುತ್ತಿದ್ದಂತೆ ಆರ್.ಆರ್.ಟಿ ವಿಭಾಗದಿಂದ ಚುನಾವಣೆ ವಿಭಾಗಕ್ಕೆ ಎತ್ತಂಗಡಿ ಮಾಡಲಾಯಿತು. ಅಲ್ಲಿಯೂ ತನ್ನ ಹಳೆಯ ಚಾಳಿ ಮುಂದುವರೆಸಿದ ಪ್ರಸನ್ನಕುಮಾರ್ ಲಕ್ಷ್ಮೀ ಕಟಾಕ್ಷ ಮಾಡಿಸಿಕೊಂಡು ಮೀಸಲು ಪಟ್ಟಿಯನ್ನೇ ತನಗಿಷ್ಟ ಬಂದ ರೀತಿಯಲ್ಲಿ ತಿರುಚಿದ್ದಾರೆಂದು ಕಲ್ಕರೆ ಶಿವಣ್ಣ ಆರೋಪಿಸಿದರು. ಯಾವ ಇಲಾಖೆಗೆ ಈ ಪ್ರಸನ್ನಕುಮಾರ್ ವಕ್ಕರಿಸಿದರು ಹಣದ ಜೋಳಿಗೆ ಹಿಡಿದುಕೊಂಡು ಕೈಒಡ್ಡುತ್ತಿದ್ದರೆಂಬುದು ಸಾರ್ವಜನಿಕರ ಆರೋಪ.
ಪ್ರತಿಭಟನೆ : ಕರ್ತವ್ಯ ನಿರತ ಅಧಿಕಾರಿ ಪ್ರಸನ್ನಕುಮಾರ್ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ಕಂದಾಯ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮರಿದೇವರು, ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಗುರುಲಿಂಗಯ್ಯ, ಉಪಾಧ್ಯಕ್ಷ ಹರ್ಷ, ಮಾಗಡಿ ತಾ. ಅಧ್ಯಕ್ಷ ಮಹಾಲಿಂಗಯ್ಯ ಮತ್ತಿತರರು ಭಾಗವಹಿಸಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications