ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಮುಗಲಭೆ ನಡೆದರೆ ಸರಕಾರವೇ ಹೊಣೆ

By Mrutyunjaya Kalmat
|
Google Oneindia Kannada News

Veerappa Moily
ಕಾರ್ಕಳ, ಫೆ. 15 : ರಾಜ್ಯದ ಯಾವುದೇ ಮೂಲೆಯಲ್ಲಿ ಕೋಮು ಗಲಭೆಗಳು ನಡೆದರೂ ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಹೇಳಿದರು.

ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಕೋಮುಗಲಭೆ ನಿಗ್ರಹ ಕಾಯ್ದೆಯನ್ನು ಜಾರಿಗೆ ತಂದಿದ್ದರೂ ರಾಜ್ಯದಲ್ಲಿ ಚರ್ಚ್ ಮೇಲೆ ದಾಳಿ ನಡೆಯುತ್ತಿರುವ ಖಂಡನೀಯ ಕೆಲಸ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೋಟೇಶ್ವರ ಬಳಿಯ ಬ್ರೋಟೋ ಚರ್ಚ್ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರಕಾರವನ್ನು ಸೂಚನೆ ನೀಡಿದ ಅವರು, ಕೋಮು ಗಲಭೆ ತಡೆಯಲು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ದೇಶದ ನ್ಯಾಯಾಲಯಗಳಲ್ಲಿ ಎಲ್ಲ ಪ್ರಕರಣಗಳನ್ನು ದಾಖಲಾದ ದಿನದಿಂದ ಮೂರು ವರ್ಷದೊಳಗೆ ಇತ್ಯರ್ಥಪಡಿಸುವ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದರು. ದೇಶದಲ್ಲಿ ಜನರು ಹಸಿವೆಯಿಂದಸಾಬಾರದು ಎಂದು ದೃಷ್ಟಿಯಿಂದ ಆಹಾರ ಭದ್ರತೆ ಶಾಸನ ರೂಪಿಸಲಾಗಿದೆ. ಬಡತನ ರೇಖೆಯ ಪಟ್ಟಿಯಲ್ಲಿರುವ ಪ್ರತಿ ಕುಟುಂಬಕ್ಕೆ 25 ಕೆಜಿ ಆಹಾರ ಧಾನ್ಯಗಳನ್ನು 3 ರುಪಾಯಿ ಕೆಜಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಮೊಯ್ಲಿ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X