ಬಿಬಿಎಂಪಿ ಚುನಾವಣೆ ಕಾಲಾವಕಾಶ ಕೋರಿ ಅರ್ಜಿ

ಮಾರ್ಚ್ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸ್ಪಷ್ಟ ತಾಕೀತು ಮಾಡಿತ್ತು. ಆದರೆ, ರಾಜ್ಯ ಸರಕಾರ ಮಾರ್ಚ್ ತಿಂಗಳಲ್ಲಿ ವಿವಿಧ ತರಗತಿಗಳ ಪರೀಕ್ಷೆಗಳು ನಡೆಯಲಿವೆ. ಬಜೆಟ್ ನ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಹಾಗೂ ಅಧಿವೇಶನವನ್ನು ನಡೆಬೇಕಿರುವ ಕಾರಣ ಬಿಬಿಎಂಪಿ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡುವಂತೆ ಕೋರಿ ಸುಪ್ರಿಂಕೋರ್ಟ್ ಮೇಲ್ಮನವಿ ಸಲ್ಲಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಲಾವಕಾಶ ಕೋರಿ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ ಅರ್ಜಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಚ್ ತಿಂಗಳು ಪರೀಕ್ಷಾ ಸಮಯವಾಗಿದೆ. ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸುವುದು ಎಷ್ಟು ಸೂಕ್ತ. ಈ ಎರಡರಲ್ಲಿ ಯಾವುದನ್ನಾದರೂ ಒಂದನ್ನು ಮುಂದೂಡಲೇಬೇಕಿತ್ತು. ಹೀಗಾಗಿ ಚುನಾವಣೆಗಳನ್ನು ಮುಂದೂಡುವುದು ಸರಿ ಎನ್ನಿಸಿದ್ದರಿಂದ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.












Click it and Unblock the Notifications