ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಬಿಎಂಪಿ ಚುನಾವಣೆ ಕಾಲಾವಕಾಶ ಕೋರಿ ಅರ್ಜಿ
ಮಾರ್ಚ್ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸ್ಪಷ್ಟ ತಾಕೀತು ಮಾಡಿತ್ತು. ಆದರೆ, ರಾಜ್ಯ ಸರಕಾರ ಮಾರ್ಚ್ ತಿಂಗಳಲ್ಲಿ ವಿವಿಧ ತರಗತಿಗಳ ಪರೀಕ್ಷೆಗಳು ನಡೆಯಲಿವೆ. ಬಜೆಟ್ ನ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಹಾಗೂ ಅಧಿವೇಶನವನ್ನು ನಡೆಬೇಕಿರುವ ಕಾರಣ ಬಿಬಿಎಂಪಿ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡುವಂತೆ ಕೋರಿ ಸುಪ್ರಿಂಕೋರ್ಟ್ ಮೇಲ್ಮನವಿ ಸಲ್ಲಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಲಾವಕಾಶ ಕೋರಿ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ ಅರ್ಜಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಚ್ ತಿಂಗಳು ಪರೀಕ್ಷಾ ಸಮಯವಾಗಿದೆ. ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸುವುದು ಎಷ್ಟು ಸೂಕ್ತ. ಈ ಎರಡರಲ್ಲಿ ಯಾವುದನ್ನಾದರೂ ಒಂದನ್ನು ಮುಂದೂಡಲೇಬೇಕಿತ್ತು. ಹೀಗಾಗಿ ಚುನಾವಣೆಗಳನ್ನು ಮುಂದೂಡುವುದು ಸರಿ ಎನ್ನಿಸಿದ್ದರಿಂದ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.
Comments
yediyurappa ಬೆಂಗಳೂರು ಯಡಿಯೂರಪ್ಪ bangalore supreme court high court ಸುಪ್ರಿಂಕೋರ್ಟ್ ಹೈಕೋರ್ಟ್ ಬಿಬಿಎಂಪಿ ಚುನಾವಣೆ examination bbmp election
Story first published: Tuesday, February 16, 2010, 17:28 [IST]