ಈಡನ್ ಗಾರ್ಡನ್ ಕಿಂಗ್ ವಿವಿಎಸ್ ಲಕ್ಷ್ಮಣ್

ಟೆಸ್ಟ್ ಅಗ್ರಕ್ರಮಾಂಕಕ್ಕಾಗಿ ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ಹಣಾಹಣಿಯಲ್ಲಿ ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕೂಡಿ ಹಾಕಿದೆ. ಸೋಮವಾರ ಸಚಿನ್, ವೀರೇಂದ್ರ ಸೆಹ್ವಾಗ್ ಅವರ ಆಕರ್ಷಕ ಶತಕಗಳನ್ನು ಗಳಿಸಿದ್ದರು. ಇಂದು ಲಕ್ಷ್ಮಣ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಹರಿಣಗಳ ಬೌಲರ್ ಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಮೂಲಕ ಸೆಂಚುರಿ ಬಾರಿಸಿದರು. ಭಾರತ 643/6 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ. ಒಟ್ಟು 347 ರನ್ ಗಳ ಮುನ್ನಡೆಯನ್ನು ಪಡೆದಿದೆ.
ತಾಳ್ಮೆಯ ಆಟದ ಆಡಿದ ಲಕ್ಷ್ಮಣ ಟೆಸ್ಟ್ ಜೀವನ 15ನೇ ಸೆಂಚುರಿಯನ್ನು ಬಾರಿಸಿದರು. ಇದೇ ಮೈದಾನದಲ್ಲಿ 2001ರಲ್ಲಿ ಲಕ್ಷ್ಮಣ್ ಆಸ್ಟ್ರೇಲಿಯಾ ವಿರುದ್ದ ಎರಡನೇ ಇನ್ನಿಂಗ್ಸಿನಲ್ಲಿ 281 ರನ್ ಗಳಿಸುವ ಮೂಲಕ ಭಾರತವನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಸೆಂಚುರಿ ಮೂಲಕ ಈಡನ್ ಗಾರ್ಡನ್ ಮೈದಾನದಲ್ಲಿ ಲಕ್ಷ್ಮಣ 1000 ರನ್ ಗಳಿಸಿದ ಹೆಗ್ಗಳಿಕೆಗೂ ಪಾತ್ರರಾದರು.
ಎರಡನೇ ದಿನದಾಟದ ಅಂತ್ಯಕ್ಕೆ 21 ರನ್ ಗಳಿಸಿ ಔಟಾಗದೆ ಉಳಿದಿದ್ದ ಲಕ್ಷ್ಮಣ್ ಇಂದು ಅಮಿತ್ ಮಿಶ್ರಾ ಅವರೊಂದಿಗೆ ಆಟ ಮುಂದುವರಿಸಿದರು. ಆದರೆ, ಅಮಿತ್ ಮಿಶ್ರಾ ಹೆಚ್ಚು ಹೊತ್ತು ಕ್ರೀಸ್ ಬಳಿ ನಿಲ್ಲಲು ಸಾಧ್ಯವಾಗಲಿಲ್ಲ. ಹರಿಣಗಳ ಕರಾರುವಾಕ್ಕಾದ ದಾಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆಗ ಲಕ್ಷ್ಮಣ್ ಜೊತೆಗೂಡಿದ ನಾಯಕ ಧೋನಿ ಜವಾಬ್ದಾರಿ ತಕ್ಕಂತೆ ಆಟವಾಡಿದರು. ಲಕ್ಷ್ಮಣ್ ಅವರಿಗೆ ಸೂಕ್ತ ಬೆಂಬಲ ನೀಡುವುದರ ಜೊತೆಗೆ ಅವಕಾಶ ಸಿಕ್ಕಾಗ ಹರಿಣಗಳ ಬೌಲ್ ಗಳನ್ನು ಬೌಂಡರಿಗೆ ಅಟ್ಟುತ್ತಿದ್ದ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಮುದನೀಡುವಂತಿತ್ತು.
ಟೆಸ್ಟ್ ನಲ್ಲಿ ನಾಯಕ ಧೋನಿಯ ನಾಲ್ಕನೇ ಶತಕ ಇದಾಗಿದ್ದು, ಟೆಸ್ಟ್ ನಲ್ಲಿ ಒಟ್ಟು ಅವರು 2428 ರನ್ ಗಳಿಸಿದ್ದಾರೆ. ಲಕ್ಷ್ಮಣ ಅವರು 15 ಶತಕದ ಮೂಲಕ 7135 ರನ್ ಗಳಿಸಿದ್ದಾರೆ. ಅಂತಿಮವಾಗಿ ಧೋನಿ 132 ರನ್ ಹಾಗೂ ವಿವಿಎಸ್ ಲಕ್ಷ್ಮಣ್ 143 ರನ್ ಗಳಿಸಿ ಅಜೇಯರಾಗಿ ಪೆವಿಲಿಯನ್ ಗೆ ಹಿಂದಿರುಗಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications