ಈಡನ್ ಗಾರ್ಡನ್ ಕಿಂಗ್ ವಿವಿಎಸ್ ಲಕ್ಷ್ಮಣ್

ಟೆಸ್ಟ್ ಅಗ್ರಕ್ರಮಾಂಕಕ್ಕಾಗಿ ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನ ಹಣಾಹಣಿಯಲ್ಲಿ ಭಾರತ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕೂಡಿ ಹಾಕಿದೆ. ಸೋಮವಾರ ಸಚಿನ್, ವೀರೇಂದ್ರ ಸೆಹ್ವಾಗ್ ಅವರ ಆಕರ್ಷಕ ಶತಕಗಳನ್ನು ಗಳಿಸಿದ್ದರು. ಇಂದು ಲಕ್ಷ್ಮಣ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಹರಿಣಗಳ ಬೌಲರ್ ಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಮೂಲಕ ಸೆಂಚುರಿ ಬಾರಿಸಿದರು. ಭಾರತ 643/6 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ. ಒಟ್ಟು 347 ರನ್ ಗಳ ಮುನ್ನಡೆಯನ್ನು ಪಡೆದಿದೆ.
ತಾಳ್ಮೆಯ ಆಟದ ಆಡಿದ ಲಕ್ಷ್ಮಣ ಟೆಸ್ಟ್ ಜೀವನ 15ನೇ ಸೆಂಚುರಿಯನ್ನು ಬಾರಿಸಿದರು. ಇದೇ ಮೈದಾನದಲ್ಲಿ 2001ರಲ್ಲಿ ಲಕ್ಷ್ಮಣ್ ಆಸ್ಟ್ರೇಲಿಯಾ ವಿರುದ್ದ ಎರಡನೇ ಇನ್ನಿಂಗ್ಸಿನಲ್ಲಿ 281 ರನ್ ಗಳಿಸುವ ಮೂಲಕ ಭಾರತವನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಸೆಂಚುರಿ ಮೂಲಕ ಈಡನ್ ಗಾರ್ಡನ್ ಮೈದಾನದಲ್ಲಿ ಲಕ್ಷ್ಮಣ 1000 ರನ್ ಗಳಿಸಿದ ಹೆಗ್ಗಳಿಕೆಗೂ ಪಾತ್ರರಾದರು.
ಎರಡನೇ ದಿನದಾಟದ ಅಂತ್ಯಕ್ಕೆ 21 ರನ್ ಗಳಿಸಿ ಔಟಾಗದೆ ಉಳಿದಿದ್ದ ಲಕ್ಷ್ಮಣ್ ಇಂದು ಅಮಿತ್ ಮಿಶ್ರಾ ಅವರೊಂದಿಗೆ ಆಟ ಮುಂದುವರಿಸಿದರು. ಆದರೆ, ಅಮಿತ್ ಮಿಶ್ರಾ ಹೆಚ್ಚು ಹೊತ್ತು ಕ್ರೀಸ್ ಬಳಿ ನಿಲ್ಲಲು ಸಾಧ್ಯವಾಗಲಿಲ್ಲ. ಹರಿಣಗಳ ಕರಾರುವಾಕ್ಕಾದ ದಾಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆಗ ಲಕ್ಷ್ಮಣ್ ಜೊತೆಗೂಡಿದ ನಾಯಕ ಧೋನಿ ಜವಾಬ್ದಾರಿ ತಕ್ಕಂತೆ ಆಟವಾಡಿದರು. ಲಕ್ಷ್ಮಣ್ ಅವರಿಗೆ ಸೂಕ್ತ ಬೆಂಬಲ ನೀಡುವುದರ ಜೊತೆಗೆ ಅವಕಾಶ ಸಿಕ್ಕಾಗ ಹರಿಣಗಳ ಬೌಲ್ ಗಳನ್ನು ಬೌಂಡರಿಗೆ ಅಟ್ಟುತ್ತಿದ್ದ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಮುದನೀಡುವಂತಿತ್ತು.
ಟೆಸ್ಟ್ ನಲ್ಲಿ ನಾಯಕ ಧೋನಿಯ ನಾಲ್ಕನೇ ಶತಕ ಇದಾಗಿದ್ದು, ಟೆಸ್ಟ್ ನಲ್ಲಿ ಒಟ್ಟು ಅವರು 2428 ರನ್ ಗಳಿಸಿದ್ದಾರೆ. ಲಕ್ಷ್ಮಣ ಅವರು 15 ಶತಕದ ಮೂಲಕ 7135 ರನ್ ಗಳಿಸಿದ್ದಾರೆ. ಅಂತಿಮವಾಗಿ ಧೋನಿ 132 ರನ್ ಹಾಗೂ ವಿವಿಎಸ್ ಲಕ್ಷ್ಮಣ್ 143 ರನ್ ಗಳಿಸಿ ಅಜೇಯರಾಗಿ ಪೆವಿಲಿಯನ್ ಗೆ ಹಿಂದಿರುಗಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications