ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಎಂ ಅವರಿಂದ ದಲಿತರಿಗೆ ಅನ್ಯಾಯ, ಜಿಗಜಿಣಗಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಿಗಮ ಮಂಡಳಿಯಲ್ಲಿ ದಲಿತರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಿದೆ ತಾರತಮ್ಯ ನೀತಿಯನ್ನು ಮುಂದುರಿಸಿಕೊಂಡು ಬರುತ್ತಿದ್ದಾರೆ. ದಲಿತರಿಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹಲವಾರು ಬಾರಿ ಮನವಿ ಮಾಡಿ ಗಮನಕ್ಕೆ ತಂದರೂ ತಮ್ಮ ವರ್ತನೆಯನ್ನು ತಿದ್ದುಕೊಳ್ಳದೆ ಅನ್ಯಾಯವನ್ನೇ ಮುಂದುವರಿಸಿದ್ದಾರೆ. ಇದೇ ರೀತಿ ಮುಂದುವರಿಸಿದರೆ ದಲಿತರು ಬಿಜೆಪಿಯಿಂದ ದೂರ ಸರಿಯುವ ಅಪಾಯವಿದೆ ಎಂದು ಜಿಗಜಿಣಗಿ ಎಚ್ಚರಿಕೆ ನೀಡಿದರು.
ಇನ್ನು ಮುಂದಾದರೂ ಮುಖ್ಯಮಂತ್ರಿಗಳು ತಮ್ಮ ನಡವಳಿಕೆಯನ್ನು ಬದಲಾವಣೆ ಮಾಡಿಕೊಂಡು ದಲಿತ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ದೊಡ್ಡ ಪಾಠ ಕಲಿಯಬೇಕಾಗುತ್ತದೆ ಎಂದು ಅವರು ಹೇಳಿದರು.
Comments
Story first published: Friday, February 19, 2010, 17:39 [IST]