ಜಾರ್ಜ್ ಅಪಹರಣ ಕೇವಲ ವದಂತಿ ; ಪತ್ನಿ

ಮರೆವಿನ ರೋಗದಿಂದ ಬಳಲುತ್ತಿರುವ ಜಾರ್ಜ್ ಫರ್ನಾಂಡಿಸ್ ಅವರನ್ನು ದೆಹಲಿ ನಿವಾಸದಿಂದ ಅಪಹರಿಸಲಾಗಿದೆ ಮತ್ತು ಇದರಲ್ಲಿ ಅವರ ಹೆಂಡತಿ ಮತ್ತು ಮಗನ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಫರ್ನಾಂಡಿಸ್ ಅವರ ಸಹೋದರ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದರು. ಅವರ ಸ್ನೇಹಿತ ಮತ್ತು ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಎಂಎನ್ ವೆಂಕಟಾಚಲಯ್ಯ ಅವರು ಜಾರ್ಜ್ ಅವರ ಇರುವಿನ ಮಾಹಿತಿ ನೀಡಬೇಕೆಂದು ಆಗ್ರಹಿಸುತ್ತಿದ್ದರು.
ಈ ಎಲ್ಲ ಆರೋಪಗಳನ್ನು ಕಬೀರ್ ಮತ್ ಸೀನ್ ತಳ್ಳಿಹಾಕಿದ್ದಾರೆ. "ಅವರನ್ನು ಬಚ್ಚಿಡಲಾಗಿಲ್ಲ, ಅವರು ನಮ್ಮೊಂದಿಗೇ ಇದ್ದಾರೆ. ಹರಿದ್ವಾರದಲ್ಲಿರುವ ಪತಂಜಲಿ ಯೋಗಪೀಠದಲ್ಲಿ ಆಯುರ್ವೇದ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು" ಎಂದು ಕಬೀರಿ ಖಾಸಗಿ ಟಿವಿ ಚಾನಲ್ಲಿಗೆ ತಿಳಿಸಿದ್ದಾರೆ. ಆದರೆ, ಆಯುರ್ವೇದದ ಚಿಕಿತ್ಸೆ ನೀಡುವ ನೆಪದಲ್ಲಿ ಅವರನ್ನು ಅಪಹರಿಸಲಾಗಿದೆ ಎಂದು ಜಾರ್ಜ್ ಅವರ ಸಹೋದರ ಮೈಕೆಲ್ ಫರ್ನಾಂಡಿಸ್ ಆರೋಪಿಸಿದ್ದರು.
ಜಾರ್ಜ್ ಫರ್ನಾಂಡಿಸ್ ಅವರಿಗೆ ಸೇರಿರುವ 25 ಕೋಟಿ ರು. ಆಸ್ತಿಗಾಗಿ ಕುಟುಂಬದಲ್ಲಿಯೇ ಭಾರೀ ಪೈಪೋಟಿ ಏರ್ಪಟ್ಟಿದೆ. 20 ವರ್ಷಗಳ ಹಿಂದೆ ಜಾರ್ಜ್ ಅವರನ್ನು ತೊರೆದಿದ್ದ ಹೆಂಡತಿ ಮತ್ತು ಮಗ, ಜಾರ್ಜ್ ಅವರ ಸಹೋದರರು ಆಸ್ತಿಯನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ, ಜಾರ್ಜ್ ಅವರನ್ನು ಮತ್ತೆ ಕೂಡಿಕೊಂಡಿದ್ದಾರೆ. ಇದನ್ನು ಜಾರ್ಜ್ ಸಹೋದರರು ತಳ್ಳಿಹಾಕಿದ್ದು, ನಮಗೆ ಅವರ ಯಾವ ಆಸ್ತಿಯೂ ಬೇಡ, ಅವರೊಬ್ಬರಿದ್ದರೆ ಸಾಕು ಎಂದು ಹೇಳಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications