ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸೋನಿಯಾ ಮನಸ್ಸು ಮಾಡಿದ್ರೆ ಸರಕಾರ ಖಲಾಸ್
ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ವಿದ್ಯುತ್ ಪೂರೈಕೆ, ಬಿಪಿಎಲ್ ಫಲಾನುಭವಿಗಳಿಗೆ ಪಡಿತರ ಹಂಚಿಕೆ ಸೇರಿದಂತೆ ಎಲ್ಲ ರಂಗಗಳಲ್ಲೂ ಸರಕಾರ ವಿಫಲವಾಗಿದೆ. ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ತಾನಾಗಿಯೇ ಅಧಿಕಾರದಿಂದ ನಿರ್ಗಮಿಸಲಿದೆ ಎಂದರು. ಗ್ರಾಮ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಿ ಅಧಿಕಾರ ಬರುವುದು ಸೋನಿಯಾ ಗಾಂಧಿ ಹಾಗೂ ಯುವ ನಾಯಕ ರಾಹುಲ್ ಗಾಂಧಿ ಅವರ ಆಶಯ. ಈ ಆಶಯವನ್ನು ಸಾಕಾರ ಮಾಡಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಸಲಹೆ ನೀಡಿದರು.
2014ರ ಚುನವಾಣೆಯಲ್ಲಿ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಅಲಂಕರಿಸುವಂತೆ ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಗುರಿ ಆಗಬೇಕು. ರಾಹುಲ್ ಗಾಂಧಿ ಕೇಂದ್ರ ಸಚಿವರಾಗುವ ಎಲ್ಲ ಅವಕಾಶಗಳಿದ್ದವು. ಆದರೆ, ಅಧಿಕಾರವನ್ನು ನಿರಾಕರಿಸಿ ಸಮಾಜಸೇವೆ ಮತ್ತು ಪಕ್ಷ ಸಂಘಟನೆಯನ್ನು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ದೇಶದ ಪ್ರಧಾನಿಯಾಗಲು ಎಲ್ಲ ಶ್ರಮಿಸಬೇಕು ಎಂದು ಮೊಯ್ಲಿ ಹೇಳಿದರು.
Comments
bjp ಬಿಜೆಪಿ ಕಾಂಗ್ರೆಸ್ congress ರಾಹುಲ್ ಗಾಂಧಿ ಸೋನಿಯಾ ಗಾಂಧಿ rahul gandhi sonia gandhi veerappa moily ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ chickballapur
Story first published: Sunday, February 21, 2010, 13:26 [IST]