ಗಣಿಗಾರಿಕೆ ಅನುಮತಿಗೆ ದೇವೇಗೌಡ ತೀವ್ರ ವಿರೋಧ

ಭೂಬ್ಯಾಂಕ್ ವಿರುದ್ಧದ ಹೋರಾಟದ ಅಂಗವಾಗಿ ಜಿಲ್ಲೆಯ ಕಡೂರಿಗೆ ಆಗಮಿಸಿದ್ದ ದೇವೇಗೌಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಭೂ ಬ್ಯಾಂಕ್ ಹೆಸರಿನಲ್ಲಿ ರಾಜ್ಯ ಸರಕಾರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹೊರಟಿರುವುದನ್ನು ವಿರೋಧಿಸಿ ಮುಂದಿನ ಹೋರಾಟದ ಕುರಿತು ಫೆ 23 ರ ಬಳಿಕ ನಿರ್ಧರಿಸಲಾಗುವುದು ಎಂದರು.
ರಾಜ್ಯದ 1.71 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ಭೂಬ್ಯಾಂಕ್ ಮಾಡಲು ನಿರ್ಧರಿಸಲಾಗಿದೆ. ಇದರ ಹಿಂದೆ ಸ್ವಾರ್ಥ ರಾಜಕಾರಣ ಅಡಗಿದೆ. ಬಲಾಢ್ಯರ ಜಮೀನು ವಶಪಡಿಸಿಕೊಳ್ಳಲು ಹಿಂದೇಟು ಹಾಕಿ ಸಾಮಾನ್ಯ ಕೃಷಿಕರ ಭೂಮಿ ಕಿತ್ತುಕೊಳ್ಳುವ ಮೂಲಕ ಅವರನ್ನು ಬೀದಿಗೆ ತರುವ ಹುನ್ನಾರ ಅಡಗಿದೆ ಎಂದು ಟೀಕಿಸಿದರು. ಮೂರ್ನಾಲ್ಕು ಗಂಟೆಗೆ ಬೆಂಗಳೂರಿಗೆ ಪ್ರವಾಸ ಮಾಡುವ ಸಾಧ್ಯತೆ ಇರುವ ದಾವಣಗೆರೆಗೆ ವಿಮಾನ ನಿಲ್ದಾಣ ಸ್ಥಾಪನೆಯ ಅಗತ್ಯ ಇದೆಯೇ ಎಂದು ದೇವೇಗೌಡ ಪ್ರಶ್ನಿಸಿದರು.












Click it and Unblock the Notifications