ಮೀಸಲಾತಿ ವಿರುದ್ಧ ಬಿಜೆಪಿ ಚಳವಳಿ

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ರಂಗನಾಥ್ ಮಿಶ್ರಾ ಆಯೋಗದ ವರದಿ ದಲಿತ ಮತ್ತು ಹಿಂದುಳಿದ ವರ್ಗದವರಿಗೆ ಮರಣ ಶಾಸನ. ಧರ್ಮ ಮತ್ತು ಲಿಂಗ ಆಧರಿಸಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವುದು ಯಾವ ನ್ಯಾಯ. ಈ ವರದಿ ಪ್ರಕಾರ ಶೇ. 15ರಷ್ಟು ಮೀಸಲಾತಿ ನೀಡಬೇಕು ಎಂದು ವರದಿ ಹೇಳಿದೆ. ಅದರಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವುದು ಯಾವ ಕಾರಣಕ್ಕೆ?
ದಲಿತ ಮತ್ತು ಹಿಂದುಳಿದ ಜನಾಂಗದಲ್ಲಿ ಲಕ್ಷಾಂತರ ಮಂದಿ ಈವರೆಗೂ ಮೂಲಭೂತ ಸೌಕರ್ಯಗಳು ಸಿಕ್ಕಿಲ್ಲ. ಹೀಗಿರುವಾಗ ಕೇಂದ್ರದ ಯುಪಿಎ ಸರಕಾರ ಈ ವರದಿಯನ್ನು ಜಾರಿಗೊಳಿಸಲು ಮುಂದಾಗುತ್ತಿರುವುದೇಕೆ? ಇದು ಅಲ್ಪಸಂಖ್ಯಾತರ ಒಲೈಕೆ ರಾಜಕಾರಣದಲ್ಲವೇ? ದೇಶದ ಅಭಿವೃದ್ಧಿಗೆ ಮಾರಕವಾಗುವ ಇಂತಹ ವರದಿಯನ್ನು ಜಾರಿಗೊಳಿಸಬಾರದು ಎಂದು ಎಂದು ಈಶ್ವರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ರಂಗನಾಥ್ ಮಿಶ್ರಾ ಅವರ ವರದಿ ಜಾರಿಗೊಳಿಸುವುದನ್ನು ದಲಿತರು ಮತ್ತು ಹಿಂದುಳಿದ ವರ್ಗದವರು ಸಹಿಸುವುದಿಲ್ಲ. ಏಕೆಂದರೆ ಈ ವರದಿ ಜಾರಿಗೆ ಬಂದರೆ ಅವರೆಲ್ಲರಿಗೆ ಅನ್ಯಾಯವಾಗುತ್ತದೆ ಎಂದು ಈಶ್ವರಪ್ಪ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಮಿಶ್ರಾ ಅವರ ವರದಿ ದಲಿತರನ್ನು ಇಸ್ಲಾಂ ಮತ್ತು ಕ್ರಿಸ್ತಮತಕ್ಕೆ ಮತಾಂತರಗೊಳ್ಳುವಂತೆ ಪ್ರೇರೇಪಿಸುತ್ತದೆ ಎಂದೂ ಅವರು ವ್ಯಾಖ್ಯಾನಿಸಿದರು.
ಫೆ. 25ರಂದು ಬಿಜೆಪಿ ಸಭೆ
ರಂಗನಾಥ್ ಮಿಶ್ರಾ ವರದಿ ಕುರಿತು ಚರ್ಚಿಸಲು ಫೆ. 25 ಗುರುವಾರದಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಈ ಸಭೆಗೆ ಸಂಸತ್ ಸದಸ್ಯರು, ಶಾಸಕರು, ಸಚಿವರು, ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.
ಗುರುವಾರದ ಸಭೆಯಲ್ಲಿ ಮಿಶ್ರಾ ವರದಿ ಕುರಿತ ಚರ್ಚೆಯಲ್ಲದೆ, ಏಪ್ರಿಲ್ ನಲ್ಲಿ ಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಭಾಜಪ ತನ್ನನ್ನು ತಾನು ಹೇಗೆ ಅಣಿಗೊಳಿಸಿಕೊಳ್ಳಬೇಕು ಎಂಬ ಬಗ್ಗೆಯೂ ಚಿಂತನೆ ನಡೆಸಲಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಒಬ್ಬರನ್ನು ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ನೇಮಕ ಮಾಡಲಾಗುತ್ತದೆ. ಜತೆಗೆ, ಪ್ರತಿಯೊಂದು ಜಿಲ್ಲೆಗೂ ಚುನಾವಣೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷರು ವಿವರಿಸಿದರು.
ರಂಗನಾಥ್ ಮಿಶ್ರಾ ಆಯೋಗದಲ್ಲಿ ಸುಪ್ರಿಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಕೇಂದ್ರ ಮಾನವ ಹಕ್ಕು ಆಯೋಗದ ಮಾಜಿ ಅಧ್ಯಕ್ಷ ರಂಗನಾಥ್ ಮಿಶ್ರಾ ಮುಖ್ಯಸ್ಥರಾಗಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಚೇರಮನ್ ಡಾ. ತಾಹೀರ್ ಮೊಹ್ಮದ್, ದೆಹಲಿಯ ಸ್ಟೀಫನ್ಸ್ ಕಾಲೇಜಿನ ಅನಿಲ್ ವಿಲ್ಸನ್, ಪಂಜಾಬ್ ನ್ಯಾಷನಲ್ ಇನ್ಟಿಟ್ಯೂಟ್ ನ ನಿರ್ದೇಶಕ ಮಹೀಂದರ್ ಸಿಂಗ್ ಹಾಗೂ ಆಶಾ ದಾಸ್ ಅವರುಗಳು ಸದಸ್ಯರಾಗಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications