ಬೆಲೆ ಹೊರೆ ಇಳಿಕೆಗೆ ಪ್ರತಿಭಾ ವಾಗ್ದಾನ

ಸೋಮವಾರ ಆರಂಭವಾದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಮುಂಗಾರು ವೈಫಲ್ಯದಿಂದ ಉಂಟಾಗಿರುವ ಜಟಿಲ ಸಮಸ್ಯೆಯಿಂದ ಆಮ್ ಆದ್ಮಿಯನ್ನು ಬಚಾವ್ ಮಾಡುವುದು ಸರಕಾರದ ಆದ್ಯತೆಗಳಲ್ಲಿ ಪ್ರಮುಖ ಸ್ಥಾನ ಪಡೆಯುತ್ತದೆ ಎಂದು ವಾಗ್ದಾನ ಮಾಡಿದರು.
ಬೆಲೆ ಏರಿಕೆ ವಿರುದ್ಧ ಸರಕಾರ ಸಾರುವ ಸಮರದ ನಡುವೆಯೂ ವಾರ್ಷಿಕ ಬೆಳವಣಿಗೆಯ ವೇಗ ಕಾಪಾಡಿಕೊಳ್ಳುವುದರ ಕಡೆಗೆ ಸರಕಾರದ ಗಮನ ಇದ್ದೇ ಇರುತ್ತದೆ. ಪ್ರಸಕ್ತ ಸಾಲಿನಲ್ಲಿ ಬೆಳವಣಿಗೆಯ ವೇಗದ ಗುರಿ ಪ್ರತಿಶತ 8ರಷ್ಟು ಇರುತ್ತದೆ. ಬರುವ ಆರ್ಥಿಕ ವರ್ಷಕ್ಕೆ ಗುರಿ ಪ್ರತಿಶತ 9ರತ್ತ ನೆಟ್ಟಿರುತ್ತದೆ ಎಂದು ಪ್ರತಿಭಾ ಪ್ರತಿಪಾದಿಸಿದರು.
ದೇಶವನ್ನು ಕಾಡುತ್ತಿರುವ ನಾನಾ ಸಮಸ್ಯೆಗಳತ್ತ ಬೊಟ್ಟು ಮಾಡಿ ತೋರಿಸಿ, ಸವಿಸ್ತಾರ ಸಾಂಪ್ರದಾಯಿಕ ಭಾಷಣ ಬಿಗಿದ ರಾಷ್ಟ್ರಪತಿಗಳು ನೆರೆಯ ಪಾಕಿಸ್ತಾನದ ಬಗೆಗೆ ಹೇಳಿದ್ದು ಏನೆಂದರೆ :
"ಪಾಕಿಸ್ತಾನದೊಂದಿಗೆ ಅರ್ಥಪೂರ್ಣ ಸಂಬಂಧಗಳನ್ನು ಬೆಸೆಯುವ ಸಾಧ್ಯತೆಗಳನ್ನು ಭಾರತ ಅರಸುತ್ತದೆ. ಆದರೆ, ಭಾರತ ಕೆಲವು ಷರತ್ತುಗಳಿಗೆ ಬದ್ಧವಾಗಿದೆ. ಭಯೋತ್ಪಾದನೆಯ ಸವಾಲುಗಳನ್ನು ಮೆಟ್ಟಿನಿಲ್ಲಲು ಪಾಕ್ ಗಂಭೀರವಾಗಿ ಚಿಂತಿಸಬೇಕು ಮತ್ತು ಭಾರತದ ವಿರುದ್ಧದ ಭಯೋತ್ಪಾದಕ ಕೃತ್ಯಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು."
ಇಂದಿನಿಂದ ಆರಂಭವಾದ ಅಧಿವೇಶನ ಮೂರು ತಿಂಗಳ ಅವಧಿಯದಾಗಿರುತ್ತದೆ. ರೈಲ್ವೆ ಮುಂಗಡ ಪತ್ರವನ್ನು ಫೆ. 24ರ ಬುಧವಾರದಂದು ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಮಂಡಿಸುತ್ತಿದ್ದಾರೆ. 2010-11 ಸಾಲಿನ ಆರ್ಥಿಕ ಸಮೀಕ್ಷೆಯನ್ನು 25ರಂದು ಪ್ರಕಟಿಸಲಾಗುತ್ತಿದೆ. ಸಾಮಾನ್ಯ ಮುಂಗಡಪತ್ರ ಫೆ. 26, ಶುಕ್ರವಾರದಂದು ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ ಮಂಡಿಸಲಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications