ಕಾರ್ಲಟನ್ ಅಗ್ನಿ ದುರಂತದಲ್ಲಿ 9 ಜನರ ಸಾವು

ಹತ್ತಿರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸುಮಾರು 60 ಜನರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. 19 ಜನರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಿಸಲಾಗಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಹಲವರು ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಸತ್ತವರಲ್ಲಿ 6 ಪುರುಷರು 6 ಮತ್ತು 3 ಸ್ತ್ರೀಯರಿದ್ದಾರೆ. ಹೆಚ್ಚಿನವರು ಉಸಿರುಗಟ್ಟಿ ಸತ್ತಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚುವ ಸಂಭವವಿದೆ.
ಸತ್ತವರ ಹೆಸರುಗಳು : ಸವಿತಾ, ಅಖಿಲ್ ಉದಯ್, ರಾಜೇಶ್ ಸುಬ್ರಹ್ಮಣ್ಯ, ಬೇನ್ ಜಿ ಕುಮಾರ್, ಸುರಭಿ ಜೋಶಿ, ಪುರೋಹಿತ್ ಮದನ್ ಸಿಂಗ್, ಸುನೀಲ್ ಅಯ್ಯರ್, ಫಯಾಜ್ ಪಾಶಾ, ಸಿದ್ಧಾರ್ಥ್ ಕದಂ ಎಂದು ಗುರುತಿಸಲಾಗಿದೆ.
ಸಾಯಂಕಾಲ ನಾಲ್ಕು ಗಂಟೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಸುಮಾರು 4 ಮುಕ್ಕಾಲಿಗೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ದಾರಿಹೋಕರೆಲ್ಲ ಕಟ್ಟಡದ ಮುಂದೆ ಜಮಾಯಿಸಿದ್ದರಿಂದ ಮತ್ತು ತೀವ್ರ ವಾಹನ ದಟ್ಟಣೆ ಆಗಿದ್ದರಿಂದ ಅಗ್ನಿಶಾಮಕ ದಳ ಬರುವುದು ತಡವಾಗಿದೆ.
ಕಟ್ಟಡದ ಮೇಲಿಂದ ಪ್ರಾಣ ಉಳಿಸಿಕೊಳ್ಳಲು ಜಿಗಿದಿದ್ದರಿಂದ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಗಿದವರಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಸೇರಿದ್ದಾರೆ. ಅಗ್ನಿ ಶಾಮಕ ದಳ ಬರುವ ಮೊದಲೇ ಹೆದರಿಕೆಯಿಂದ ಮಹಿಳೆ ಜಿಗಿದಿದ್ದಾರೆ. ಅಗ್ನಿಶಾಮಕ ದಳ ಬಂದ ನಂತರ ಕೆಳಗಡೆ ಬಲೆಯನ್ನು ಹಿಡಿಯಲಾಗಿತ್ತು. ಅದರ ಮೇಲೆ ಜಿಗಿಯುವ ಪ್ರಯತ್ನದಲ್ಲಿ ಬಲೆಯ ಮೇಲೆ ಜಿಗಿಯದೆ ಪಕ್ಕದಲ್ಲಿ ಬಿದ್ದು ಓರ್ವ ಸತ್ತಿದ್ದಾನೆ ಎನ್ನಲಾಗಿದೆ.
ಹೊಟೇಲು, ಸಾಫ್ಟ್ ವೇರ್ ಸಂಸ್ಥೆ, ಕ್ಲಿನಿಕಲ್ ಸಂಶೋಧನಾ ಸಂಸ್ಥೆ ಸೇರಿದಂತೆ ಅನೇಕ ಕಂಪನಿಗಳು ಇರುವ ಏಳು ಮಹಡಿಗಳ ಕಟ್ಟಡದಲ್ಲಿ ರಕ್ಷಣಾ ಹೊರದಾರಿ ತಿಳಿದಿಲ್ಲದ್ದರಿಂದ ಲಿಫ್ಟ್ ನತ್ತ ಎಲ್ಲರೂ ಧಾವಿಸಿದ್ದಾರೆ. ಲಿಫ್ಟ್ ಕೂಡ ಕೈಕೊಟ್ಟಿದ್ದರಿಂದ ತೀವ್ರ ಆತಂಕಕ್ಕೊಳಗಾದ ಜನ ಗೊಂದಲಕ್ಕೀಡಾಗಿದ್ದಾರೆ. ಕೆಲವರು ಗೋಡೆಯ ಪೈಪ್ ಲೈನ್ ಬಳಸಿ ಇಳಿಯಲು ಪ್ರಯತ್ನಿಸಿದ್ದಾರೆ. ಒಂದಿಬ್ಬರು ಹಗ್ಗಕ್ಕೆ ಜೋತುಬಿದ್ದಿದ್ದು ಪಾರಾಗಲು ಯತ್ನಿಸಿದ್ದಾರೆ.
ಅಗ್ನಿ ಆಕಸ್ಮಿಕ ಸಂಭವಿಸಿದ ಸ್ಥಳಕ್ಕೆ ಮತ್ತು ಮಣಿಪಾಲ್ ಆಸ್ಪತ್ರೆಗೆ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ನೀಡಿದರು. 9 ಜನ ಸತ್ತಿರುವುದನ್ನು ಸಿಂಗ್ ಕೂಡ ದೃಢಪಡಿಸಿದ್ದಾರೆ.
ಆಪತ್ತು ನಿರ್ವಹಣೆ : ನಮ್ಮಲ್ಲೆಷ್ಟಿದೆ ಜಾಗೃತಿ?
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications