ಕಾರ್ಲಟನ್ ಅಗ್ನಿ ದುರಂತದಲ್ಲಿ 9 ಜನರ ಸಾವು

ಹತ್ತಿರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸುಮಾರು 60 ಜನರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. 19 ಜನರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಿಸಲಾಗಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಹಲವರು ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಸತ್ತವರಲ್ಲಿ 6 ಪುರುಷರು 6 ಮತ್ತು 3 ಸ್ತ್ರೀಯರಿದ್ದಾರೆ. ಹೆಚ್ಚಿನವರು ಉಸಿರುಗಟ್ಟಿ ಸತ್ತಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚುವ ಸಂಭವವಿದೆ.
ಸತ್ತವರ ಹೆಸರುಗಳು : ಸವಿತಾ, ಅಖಿಲ್ ಉದಯ್, ರಾಜೇಶ್ ಸುಬ್ರಹ್ಮಣ್ಯ, ಬೇನ್ ಜಿ ಕುಮಾರ್, ಸುರಭಿ ಜೋಶಿ, ಪುರೋಹಿತ್ ಮದನ್ ಸಿಂಗ್, ಸುನೀಲ್ ಅಯ್ಯರ್, ಫಯಾಜ್ ಪಾಶಾ, ಸಿದ್ಧಾರ್ಥ್ ಕದಂ ಎಂದು ಗುರುತಿಸಲಾಗಿದೆ.
ಸಾಯಂಕಾಲ ನಾಲ್ಕು ಗಂಟೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಸುಮಾರು 4 ಮುಕ್ಕಾಲಿಗೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ದಾರಿಹೋಕರೆಲ್ಲ ಕಟ್ಟಡದ ಮುಂದೆ ಜಮಾಯಿಸಿದ್ದರಿಂದ ಮತ್ತು ತೀವ್ರ ವಾಹನ ದಟ್ಟಣೆ ಆಗಿದ್ದರಿಂದ ಅಗ್ನಿಶಾಮಕ ದಳ ಬರುವುದು ತಡವಾಗಿದೆ.
ಕಟ್ಟಡದ ಮೇಲಿಂದ ಪ್ರಾಣ ಉಳಿಸಿಕೊಳ್ಳಲು ಜಿಗಿದಿದ್ದರಿಂದ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಗಿದವರಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಸೇರಿದ್ದಾರೆ. ಅಗ್ನಿ ಶಾಮಕ ದಳ ಬರುವ ಮೊದಲೇ ಹೆದರಿಕೆಯಿಂದ ಮಹಿಳೆ ಜಿಗಿದಿದ್ದಾರೆ. ಅಗ್ನಿಶಾಮಕ ದಳ ಬಂದ ನಂತರ ಕೆಳಗಡೆ ಬಲೆಯನ್ನು ಹಿಡಿಯಲಾಗಿತ್ತು. ಅದರ ಮೇಲೆ ಜಿಗಿಯುವ ಪ್ರಯತ್ನದಲ್ಲಿ ಬಲೆಯ ಮೇಲೆ ಜಿಗಿಯದೆ ಪಕ್ಕದಲ್ಲಿ ಬಿದ್ದು ಓರ್ವ ಸತ್ತಿದ್ದಾನೆ ಎನ್ನಲಾಗಿದೆ.
ಹೊಟೇಲು, ಸಾಫ್ಟ್ ವೇರ್ ಸಂಸ್ಥೆ, ಕ್ಲಿನಿಕಲ್ ಸಂಶೋಧನಾ ಸಂಸ್ಥೆ ಸೇರಿದಂತೆ ಅನೇಕ ಕಂಪನಿಗಳು ಇರುವ ಏಳು ಮಹಡಿಗಳ ಕಟ್ಟಡದಲ್ಲಿ ರಕ್ಷಣಾ ಹೊರದಾರಿ ತಿಳಿದಿಲ್ಲದ್ದರಿಂದ ಲಿಫ್ಟ್ ನತ್ತ ಎಲ್ಲರೂ ಧಾವಿಸಿದ್ದಾರೆ. ಲಿಫ್ಟ್ ಕೂಡ ಕೈಕೊಟ್ಟಿದ್ದರಿಂದ ತೀವ್ರ ಆತಂಕಕ್ಕೊಳಗಾದ ಜನ ಗೊಂದಲಕ್ಕೀಡಾಗಿದ್ದಾರೆ. ಕೆಲವರು ಗೋಡೆಯ ಪೈಪ್ ಲೈನ್ ಬಳಸಿ ಇಳಿಯಲು ಪ್ರಯತ್ನಿಸಿದ್ದಾರೆ. ಒಂದಿಬ್ಬರು ಹಗ್ಗಕ್ಕೆ ಜೋತುಬಿದ್ದಿದ್ದು ಪಾರಾಗಲು ಯತ್ನಿಸಿದ್ದಾರೆ.
ಅಗ್ನಿ ಆಕಸ್ಮಿಕ ಸಂಭವಿಸಿದ ಸ್ಥಳಕ್ಕೆ ಮತ್ತು ಮಣಿಪಾಲ್ ಆಸ್ಪತ್ರೆಗೆ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ನೀಡಿದರು. 9 ಜನ ಸತ್ತಿರುವುದನ್ನು ಸಿಂಗ್ ಕೂಡ ದೃಢಪಡಿಸಿದ್ದಾರೆ.
ಆಪತ್ತು ನಿರ್ವಹಣೆ : ನಮ್ಮಲ್ಲೆಷ್ಟಿದೆ ಜಾಗೃತಿ?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications