ಕಬ್ಬಿನ ಬೆಲೆ ನಿಗದಿಗೆ ಸಲಹಾ ಸಮಿತಿ ರಚನೆ

Sugarcane
ಬೆಂಗಳೂರು, ಫೆ. 23 : ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರ ಹಿತದೃಷ್ಟಿಯಿಂದ ಕಬ್ಬಿಗೆ ರಾಜ್ಯ ಸಲಹಾ ಬೆಲೆ ನಿಗದಿಪಡಿಸುವ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ರಾಜ್ಯ ಸಲಹಾ ಬೆಲೆ ನಿಗದಿಪಡಿಸಲಾಗಿರುವ ವಿವಿಧ ರಾಜ್ಯಗಳಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ ಅದರಂತೆ ನಮ್ಮ ರಾಜ್ಯದಲ್ಲಿಯೂ ಸಹ ಸಲಹಾ ಬೆಲೆ ನಿಗದಿಪಡಿಸಿರುವ ಸಾಧ್ಯತೆಗಳ ಅಧ್ಯಯನ ನಡೆಸಲು ಕರ್ನಾಟಕ ಕೃಷಿ ಮಿಶನ್ ಎಸ್ ಪಾಟೀಲ್ ಅಧ್ಯಕ್ಷತೆಯಲ್ಲಿ ಸರ್ಕಾರವು ಸಲಹಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಬೆಂಗಳೂರು, ನಿರ್ದೇಶಕರು, ಕೃಷಿ ಇಲಾಖೆ, ಬೆಂಗಳೂರು, ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿ ನಿಗಮ, ಬೆಂಗಳೂರು, ಅಧ್ಯಕ್ಷರು, ಕಾರ್ಯದರ್ಶಿ, ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಒಕ್ಕೂಟ, ಬೆಂಗಳೂರು, ವ್ಯವಸ್ಥಾಪಕ ನಿರ್ದೇಶಕರು, ದಿ. ಮೈಸೂರು ಸಕ್ಕರೆ ಕಾರ್ಖಾನೆ ನಿಗಮ, ಮಂಡ್ಯ. ಡಾ ತಂಗಮುತ್ತು, ಸಕ್ಕರೆ ತಜ್ಞರು, ಕರ್ನಾಟಕ ಸಕ್ಕರೆ ಸಂಸ್ಥೆ, ಬೆಳಗಾವಿ. ಡಾ ಗೋಪಿನಾಥ್, ಉಪಾಧ್ಯಕ್ಷರು, (ಸಂಶೋಧನಾ ಹಾಗೂ ಅಭಿವೃದ್ಧಿ) ಇಐಡಿ, ಪ್ಯಾರಿ ಕಂಪನಿ, ಬೆಂಗಳೂರು. ವ್ಯವಸ್ಥಾಪಕ ನಿರ್ದೇಶಕರು, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಕೃಷ್ಣನಗರ, ಬಿಜಾಪುರ ಜಿಲ್ಲೆ ಇವರುಗಳು ಸದಸ್ಯರು ಹಾಗೂ ನಿರ್ದೇಶಕರು, ಕರ್ನಾಟಕ ಸಕ್ಕರೆ ಸಂಸ್ಥೆ, ಬೆಳಗಾವಿ ಇವರು ಸದಸ್ಯ ಕಾರ್ಯದಶಿಗಳಾಗಿರುತ್ತಾರೆ ಎಂದು ಸರಕಾರ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+