ಕಾರ್ಲ್ಟನ್ ಕಟ್ಟಡದ ಮಾಲಿಕನ ವಿರುದ್ಧ ಮೊಕದ್ದಮೆ

ಮಂಗಳವಾರ, ಫೆಬ್ರವರಿ 23ರಂದು ಸಂಭವಿಸಿದ ಅಗ್ನಿ ದುರಂತದಲ್ಲಿ ಕಟ್ಟಡದಿಂದ ಸುಲಭವಾಗಿ ಹೊರಬರಲಾರದೆ ಮೂವರು ಮೇಲಿನಿಂದ ಜಿಗಿದು ಮತ್ತು ಆರು ಜನ ದಟ್ಟ ಹೊಗೆಯಿಂದ ಉಸಿರುಗಟ್ಟಿ ಮೃತರಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಮತ್ತು ಕಟ್ಟಡ ನಿರ್ಮಾಣದಲ್ಲಿ ಮಾಲಿಕರು ನಿಯಮ ಉಲ್ಲಂಘಿಸಿದ್ದಾರೆಂಬ ಆರೋಪದ ಮೇಲೆ ತನಿಖೆ ನಡೆಸಬೇಕೆಂದು ಸರಕಾರ ಆದೇಶಿಸಿದೆ ಮತ್ತು ನಗರದಾದ್ಯಂತ ಇರುವ ಎಲ್ಲ ಬಹುಮಹಡಿ ಕಟ್ಟಡಗಳಲ್ಲಿ ರಕ್ಷಣಾ ವ್ಯವಸ್ಥೆಯನ್ನು ವೀಕ್ಷಿಸಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೇಳಿದೆ.
ಹಳೆ ಏರ್ಪೋರ್ಟ್ ರಸ್ತೆಯಲ್ಲಿ ದೊಮ್ಮಲೂರು ವೃತ್ತದಲ್ಲಿರುವ ಕಾರ್ಲ್ಟನ್ ಕಟ್ಟಡಕ್ಕೆ ಅಗ್ನಿಶಾಮಕ ದಳ ಬೀಗ ಜಡಿದಿದೆ. ಏಳು ಮಹಡಿಯ ಕಟ್ಟಡದಲ್ಲಿ ಬೆಂಕಿ ನಂದಿಸು ವ್ಯವಸ್ಥೆ ಸರಿಯಾಗಿತ್ತೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಹೇಳಿದ್ದಾರೆ.
ಬೆಂಕಿ ಅನಾಹುತ ಸಂಭವಿಸುತ್ತಿದ್ದಂತೆ ಜನ ಎಲ್ಲೆಲ್ಲೂ ನೆರೆದಿದ್ದರಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬೇಗನೆ ಆಗಮಿಸುವುದು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಹಲವರು ಜೀವ ಕಳೆದುಕೊಳ್ಳಬೇಕಾಯಿತು. ಆದರೆ, ಇಂದು ಕೂಡ ದಾರಿಹೋಕರಿಗೆ ಈ ಕಟ್ಟಡ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಬೆಳಗಿನ ಜಾವ ವಾಹನಗಳನ್ನು ನಿಲ್ಲಿಸಿ 9 ಜನರನ್ನು ಬಲಿ ತೆಗೆದುಕೊಂಡ ಕಟ್ಟಡವನ್ನು ಮೇಲ್ಸೇತುವೆ ಮೇಲೆ ನಿಂತು ನೋಡುತ್ತಿದ್ದುದು ಕಂಡುಬಂದಿತು. ಇದರಿಂದಾಗಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು.
ವಿಡಿಯೋ : ಕಾರ್ಲ್ಟನ್ ಟವರ್ಸ್ ನಲ್ಲಿ ಅಗ್ನಿ ದುರಂತ
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications