ಜನ ರೊಚ್ಚಿಗೇಳುವ ಮೊದಲೇ ನೀರು ಕೊಡಿ

ಪಾತಾಳಕ್ಕಿಳಿದ ಅಂತರ್ಜಲ ಮಟ್ಟ, ವಿದ್ಯುತ್ ಕಣ್ಣಾಮುಚ್ಚಾಲೆ, ವಾಟರ್ಮೆನ್ಗಳ ಅಸಮರ್ಪಕ ನಿರ್ವಹಣೆ, ಕಳಪೆ ಪೈಪ್ಲೈನ್, ಪದೇ ಪದೇ ಕೆಟ್ಟು ನಿಲ್ಲುವ ಮೋಟಾರುಗಳಿಂದಾಗಿ ನೀರಿನ ಸಮಸ್ಯೆ ತೀವ್ರತೆ ಪಡೆದುಕೊಂಡಿದ್ದರೂ ಸಂಬಂಧಿಸಿದವರು ಈ ಬಗ್ಗೆ ಗಮನಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇವೆಲ್ಲವನ್ನೂ ನಿರ್ವಹಿಸಬೇಕಾದ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸರೇಗಾ ಬಾಲ ಹಿಡಿದು ಹೊರಟವರು ಇನ್ನೂ ಹಿಂದಿರುಗಿಲ್ಲವಾದ್ದರಿಂದ ನೀರಿನ ಸಮಸ್ಯೆ ಆಲಿಸುವವರು ಯಾರೂ ಇಲ್ಲದಂತಾಗಿದೆ. ಬೇಸಿಗೆ ಬಾಗಿಲಿಗೆ ಎಡತಾಕಿದ್ದರೂ ತಾಲೂಕು ಆಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದ್ದು, ಪರಿಸ್ಥಿತಿ ಕೈತಪ್ಪುವ ಮುನ್ನ ಜನತೆಯ ದಾಹ ತಣಿಸುವತ್ತ ಕಾರ್ಯೋನ್ಮುಖವಾಗಬೇಕಾಗಿದೆ. ತಾಲೂಕಿನ ನಾಗವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗವಾರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಗ್ರಾಮದವರು ಕೆಲಸ ಕಾರ್ಯ ಬಿಟ್ಟು ನೀರು ಹರಿಸುವುದನ್ನೇ ಕಾಯ್ದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ಇಲ್ಲಿ ಕಳೆದ ಆರೇಳು ವರ್ಷಗಳ ಹಿಂದೆಯೇ ಮಿನಿ ಟ್ಯಾಂಕ್ ನಿರ್ಮಿಸಿ, ಪೈಪ್ ಲೈನ್ ಅಳವಡಿಸಲಾಗಿದೆಯಾದರೂ ಸಂಪರ್ಕದ ಭಾಗ್ಯ ಮಾತ್ರ ಇನ್ನೂ ಕೂಡಿಬಂದಿಲ್ಲ. ಇದೇ ಪಂಚಾಯಿತಿ ವ್ಯಾಪ್ತಿಯ ಎಚ್.ಮೊಗೇನಹಳ್ಳಿ ಗ್ರಾಮದಲ್ಲಿಯೂ ಸಹ ನೀರಿನ ಸಮಸ್ಯೆ ತೀವ್ರವಾಗಿದ್ದು, 5 ದಿನಗಳಿಗೊಮ್ಮೆ ನಲ್ಲಿಯಲ್ಲಿ ನೀರು ಇಣುಕುತ್ತಿದೆ. ಇನ್ನು ತಾಲೂಕಿನ ಮತ್ತೀಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ನೀರಿನ ಅಭಾವ ಎದುರಾಗಿದ್ದು, ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ಸರೇಗಾ ಹಿಂದೆ ಬಿದ್ದಿರುವುದರಿಂದ ನಿರ್ವಹಣೆ ಇಲ್ಲದೆ ಜನತೆ ಪರಿತಾಪ ಎದುರಿಸುತ್ತಿದ್ದಾರೆ.
ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ, ಹೊಸೂರುದೊಡ್ಡಿ, ಮತ್ತೀಕೆರೆ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನೀರಿಗೆ ಬರ ಬಂದಿದ್ದು, ಈ ಭಾಗದಲ್ಲಿ ಕೇವಲ 3 ಗಂಟೆ ವಿದ್ಯುತ್ ವಿತರಣೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ಜಟಿಲವಾಗಿದೆ. ಸುಳ್ಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರಿಗಾಗಿ ತಾತ್ವಾರ ಎದುರಾಗಿದ್ದು, ಇದರ ವ್ಯಾಪ್ತಿಯ ಗ್ರಾಮಗಳಾದ ಎ.ವಿ.ಹಳ್ಳಿ, ಚಕ್ಕಲೂರು, ಕೃಷ್ಣಾಪುರಗಳಲ್ಲಿ ನೀರಿಗಾಗಿ ಜನ ಬವಣೆ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೂ ಸಹ ನೀರು ಸಾಲದೆ ಜನತೆ ಆತಂಕಕ್ಕೀಡಾಗಿದ್ದಾರೆ.
ಹಾಗೆಯೇ ಬಾಣಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾಡಹಳ್ಳಿ ಹಾಗೂ ನಾಗಾಪುರ ಗ್ರಾಮಗಳಲ್ಲಿ ನೀರಿಗಾಗಿ ಜನ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಾಪುರದಲ್ಲಿ ನೀರಿಗಾಗಿ ಕೊಳವೆ ಬಾವಿ ಕೊರೆದರೂ ನೀರು ಸಿಗದಿರುವುದು ಜನತೆ ಗುಟುಕು ನೀರಿಗೂ ಪರಿತಪಿಸುವಂತಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಅಂಬಾಡಹಳ್ಳಿಯಲ್ಲಿ ನೀರಿಗಾಗಿ ಅಕ್ಕಪಕ್ಕದ ತೋಟಗಳಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಮಳೂರು ಗ್ರಾ.ಪಂ. ವ್ಯಾಪ್ತಿಯ ಬೈರಾಪಟ್ಟಣ, ಕೋಟಮಾರನಹಳ್ಳಿಗಳಲ್ಲೂ ಸಹ ನೀರಿನ ಸಮಸ್ಯೆ ಹೊರತಾಗಿಲ್ಲ. ಬೈರಾಪಟ್ಟಣ ಗ್ರಾಮದಲ್ಲಿ ಮೂರ್ನಾಲ್ಕು ದಿನಗಳೊಗೊಮ್ಮೆ ನೀರು ಸರಬರಾಜಾಗುತ್ತಿದ್ದು, ಸರಿಯಾಗಿ ನಿರ್ವಹಣೆ ಮಾಡದಿರುವುದೇ ನೀರಿನ ಅಭಾವಕ್ಕೆ ಕಾರಣವಾಗಿದೆ.
ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರಿನ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗಾಗಿ ಜನ ನಲ್ಲಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಪಂಚಾಯಿತಿ ವ್ಯಾಪ್ತಿಯ ಶಾನುಬೋಗನಹಳ್ಳಿ, ಕೊಂಡಾಪುರ, ಶ್ರವಣಯ್ಯನತೋಪು ಗ್ರಾಮಗಳಲ್ಲಿ ನೀರಿಗೆ ಜನ ವಿಪರೀತ ಸಮಸ್ಯೆ ಎದುರಿಸುತ್ತಿದ್ದಾರೆ. ಬೇಸಿಗೆಗೆ ಮೊದಲೇ ಕೆಲವೆಡೆ ಕೊಳವೆ ಭಾವಿಗಳ ವೈಪಲ್ಯವಾಗಿರುವುದು ಸಹ ಈ ಸಮಸ್ಯೆಗೆ ಕಾರಣವಾಗಿದೆ.
ಕೋಡಂಬಹಳ್ಳಿ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಭೀಕರವಾಗಿದ್ದು, ನೀರಿಗಾಗಿ ಜನತೆ ಪಕ್ಕದ ತೋಟಗಳಿಗೆ ಬಿಂದಿಗೆ ಹಿಡಿದು ತೆರಳಬೇಕಾಗಿದೆ. ತೋಟಗಳ ಮಾಲೀಕರ ಬೈಗುಳ ಕೇಳಿಕೊಂಡು ನೀರು ಕುಡಿಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ಸಮಸ್ಯೆ ಬೇಸಿಗೆಯಲ್ಲಿ ಇನ್ನಷ್ಟು ಬಿಗಡಾಯಿಸಲಿದೆ. ಇವುಗಳಲ್ಲದೆ ತಾಲೂಕಿನ ನಾನಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿಗೆ ಬರ ಎದುರಾಗಿದ್ದು, ಇವೆಲ್ಲವನ್ನೂ ನಿರ್ವಹಿಸಬೇಕಾದ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಆಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದೆ.
ಬೇಸಿಗೆ ಬರುವ ಮೊದಲೇ ಈ ಪರಿತಾಪ ಎದುರಾಗಿದ್ದು, ಇನ್ನು ಬೇಸಿಗೆ ಪ್ರವೇಶಿಸಿದರೆ ಇನ್ನೆಷ್ಟು ಸಮಸ್ಯೆ ಬಿಗಡಾಯಿಸಬಹುದು ಎಂಬುದನ್ನು ಊಹಿಸಲಸಾಧ್ಯವಾಗಿರುವುದರಿಂದ ಸಂಬಂಧಿಸಿದವರು ಈಗಲೇ ಗಮನಹರಿಸಿ ಮುಂದಿನ ದಿನಗಳಲ್ಲಿ ನೀರಿನ ದಾಹ ತಣಿಸಬೇಕಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications