ಜನ ರೊಚ್ಚಿಗೇಳುವ ಮೊದಲೇ ನೀರು ಕೊಡಿ

ಪಾತಾಳಕ್ಕಿಳಿದ ಅಂತರ್ಜಲ ಮಟ್ಟ, ವಿದ್ಯುತ್ ಕಣ್ಣಾಮುಚ್ಚಾಲೆ, ವಾಟರ್ಮೆನ್ಗಳ ಅಸಮರ್ಪಕ ನಿರ್ವಹಣೆ, ಕಳಪೆ ಪೈಪ್ಲೈನ್, ಪದೇ ಪದೇ ಕೆಟ್ಟು ನಿಲ್ಲುವ ಮೋಟಾರುಗಳಿಂದಾಗಿ ನೀರಿನ ಸಮಸ್ಯೆ ತೀವ್ರತೆ ಪಡೆದುಕೊಂಡಿದ್ದರೂ ಸಂಬಂಧಿಸಿದವರು ಈ ಬಗ್ಗೆ ಗಮನಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇವೆಲ್ಲವನ್ನೂ ನಿರ್ವಹಿಸಬೇಕಾದ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸರೇಗಾ ಬಾಲ ಹಿಡಿದು ಹೊರಟವರು ಇನ್ನೂ ಹಿಂದಿರುಗಿಲ್ಲವಾದ್ದರಿಂದ ನೀರಿನ ಸಮಸ್ಯೆ ಆಲಿಸುವವರು ಯಾರೂ ಇಲ್ಲದಂತಾಗಿದೆ. ಬೇಸಿಗೆ ಬಾಗಿಲಿಗೆ ಎಡತಾಕಿದ್ದರೂ ತಾಲೂಕು ಆಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದ್ದು, ಪರಿಸ್ಥಿತಿ ಕೈತಪ್ಪುವ ಮುನ್ನ ಜನತೆಯ ದಾಹ ತಣಿಸುವತ್ತ ಕಾರ್ಯೋನ್ಮುಖವಾಗಬೇಕಾಗಿದೆ. ತಾಲೂಕಿನ ನಾಗವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗವಾರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಗ್ರಾಮದವರು ಕೆಲಸ ಕಾರ್ಯ ಬಿಟ್ಟು ನೀರು ಹರಿಸುವುದನ್ನೇ ಕಾಯ್ದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ಇಲ್ಲಿ ಕಳೆದ ಆರೇಳು ವರ್ಷಗಳ ಹಿಂದೆಯೇ ಮಿನಿ ಟ್ಯಾಂಕ್ ನಿರ್ಮಿಸಿ, ಪೈಪ್ ಲೈನ್ ಅಳವಡಿಸಲಾಗಿದೆಯಾದರೂ ಸಂಪರ್ಕದ ಭಾಗ್ಯ ಮಾತ್ರ ಇನ್ನೂ ಕೂಡಿಬಂದಿಲ್ಲ. ಇದೇ ಪಂಚಾಯಿತಿ ವ್ಯಾಪ್ತಿಯ ಎಚ್.ಮೊಗೇನಹಳ್ಳಿ ಗ್ರಾಮದಲ್ಲಿಯೂ ಸಹ ನೀರಿನ ಸಮಸ್ಯೆ ತೀವ್ರವಾಗಿದ್ದು, 5 ದಿನಗಳಿಗೊಮ್ಮೆ ನಲ್ಲಿಯಲ್ಲಿ ನೀರು ಇಣುಕುತ್ತಿದೆ. ಇನ್ನು ತಾಲೂಕಿನ ಮತ್ತೀಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ನೀರಿನ ಅಭಾವ ಎದುರಾಗಿದ್ದು, ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ಸರೇಗಾ ಹಿಂದೆ ಬಿದ್ದಿರುವುದರಿಂದ ನಿರ್ವಹಣೆ ಇಲ್ಲದೆ ಜನತೆ ಪರಿತಾಪ ಎದುರಿಸುತ್ತಿದ್ದಾರೆ.
ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ, ಹೊಸೂರುದೊಡ್ಡಿ, ಮತ್ತೀಕೆರೆ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನೀರಿಗೆ ಬರ ಬಂದಿದ್ದು, ಈ ಭಾಗದಲ್ಲಿ ಕೇವಲ 3 ಗಂಟೆ ವಿದ್ಯುತ್ ವಿತರಣೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ಜಟಿಲವಾಗಿದೆ. ಸುಳ್ಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರಿಗಾಗಿ ತಾತ್ವಾರ ಎದುರಾಗಿದ್ದು, ಇದರ ವ್ಯಾಪ್ತಿಯ ಗ್ರಾಮಗಳಾದ ಎ.ವಿ.ಹಳ್ಳಿ, ಚಕ್ಕಲೂರು, ಕೃಷ್ಣಾಪುರಗಳಲ್ಲಿ ನೀರಿಗಾಗಿ ಜನ ಬವಣೆ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೂ ಸಹ ನೀರು ಸಾಲದೆ ಜನತೆ ಆತಂಕಕ್ಕೀಡಾಗಿದ್ದಾರೆ.
ಹಾಗೆಯೇ ಬಾಣಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾಡಹಳ್ಳಿ ಹಾಗೂ ನಾಗಾಪುರ ಗ್ರಾಮಗಳಲ್ಲಿ ನೀರಿಗಾಗಿ ಜನ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಾಪುರದಲ್ಲಿ ನೀರಿಗಾಗಿ ಕೊಳವೆ ಬಾವಿ ಕೊರೆದರೂ ನೀರು ಸಿಗದಿರುವುದು ಜನತೆ ಗುಟುಕು ನೀರಿಗೂ ಪರಿತಪಿಸುವಂತಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಅಂಬಾಡಹಳ್ಳಿಯಲ್ಲಿ ನೀರಿಗಾಗಿ ಅಕ್ಕಪಕ್ಕದ ತೋಟಗಳಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಮಳೂರು ಗ್ರಾ.ಪಂ. ವ್ಯಾಪ್ತಿಯ ಬೈರಾಪಟ್ಟಣ, ಕೋಟಮಾರನಹಳ್ಳಿಗಳಲ್ಲೂ ಸಹ ನೀರಿನ ಸಮಸ್ಯೆ ಹೊರತಾಗಿಲ್ಲ. ಬೈರಾಪಟ್ಟಣ ಗ್ರಾಮದಲ್ಲಿ ಮೂರ್ನಾಲ್ಕು ದಿನಗಳೊಗೊಮ್ಮೆ ನೀರು ಸರಬರಾಜಾಗುತ್ತಿದ್ದು, ಸರಿಯಾಗಿ ನಿರ್ವಹಣೆ ಮಾಡದಿರುವುದೇ ನೀರಿನ ಅಭಾವಕ್ಕೆ ಕಾರಣವಾಗಿದೆ.
ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರಿನ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗಾಗಿ ಜನ ನಲ್ಲಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಪಂಚಾಯಿತಿ ವ್ಯಾಪ್ತಿಯ ಶಾನುಬೋಗನಹಳ್ಳಿ, ಕೊಂಡಾಪುರ, ಶ್ರವಣಯ್ಯನತೋಪು ಗ್ರಾಮಗಳಲ್ಲಿ ನೀರಿಗೆ ಜನ ವಿಪರೀತ ಸಮಸ್ಯೆ ಎದುರಿಸುತ್ತಿದ್ದಾರೆ. ಬೇಸಿಗೆಗೆ ಮೊದಲೇ ಕೆಲವೆಡೆ ಕೊಳವೆ ಭಾವಿಗಳ ವೈಪಲ್ಯವಾಗಿರುವುದು ಸಹ ಈ ಸಮಸ್ಯೆಗೆ ಕಾರಣವಾಗಿದೆ.
ಕೋಡಂಬಹಳ್ಳಿ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಭೀಕರವಾಗಿದ್ದು, ನೀರಿಗಾಗಿ ಜನತೆ ಪಕ್ಕದ ತೋಟಗಳಿಗೆ ಬಿಂದಿಗೆ ಹಿಡಿದು ತೆರಳಬೇಕಾಗಿದೆ. ತೋಟಗಳ ಮಾಲೀಕರ ಬೈಗುಳ ಕೇಳಿಕೊಂಡು ನೀರು ಕುಡಿಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ಸಮಸ್ಯೆ ಬೇಸಿಗೆಯಲ್ಲಿ ಇನ್ನಷ್ಟು ಬಿಗಡಾಯಿಸಲಿದೆ. ಇವುಗಳಲ್ಲದೆ ತಾಲೂಕಿನ ನಾನಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿಗೆ ಬರ ಎದುರಾಗಿದ್ದು, ಇವೆಲ್ಲವನ್ನೂ ನಿರ್ವಹಿಸಬೇಕಾದ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಆಡಳಿತ ಮಾತ್ರ ಕಣ್ಮುಚ್ಚಿ ಕುಳಿತಿದೆ.
ಬೇಸಿಗೆ ಬರುವ ಮೊದಲೇ ಈ ಪರಿತಾಪ ಎದುರಾಗಿದ್ದು, ಇನ್ನು ಬೇಸಿಗೆ ಪ್ರವೇಶಿಸಿದರೆ ಇನ್ನೆಷ್ಟು ಸಮಸ್ಯೆ ಬಿಗಡಾಯಿಸಬಹುದು ಎಂಬುದನ್ನು ಊಹಿಸಲಸಾಧ್ಯವಾಗಿರುವುದರಿಂದ ಸಂಬಂಧಿಸಿದವರು ಈಗಲೇ ಗಮನಹರಿಸಿ ಮುಂದಿನ ದಿನಗಳಲ್ಲಿ ನೀರಿನ ದಾಹ ತಣಿಸಬೇಕಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications