ಮದ್ಯವ್ಯಸನ ತೊಲಗಿಸಲು ಹೃದಯ ಪರಿವರ್ತನೆ

ಮದ್ಯಪಾನ ಸಂಯಮ ಮಂಡಳಿಯ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆದರ್ಶದಲ್ಲಿ ನಂಬಿಕೆ ಇಟ್ಟಿರುವ ತಾವು ಮದ್ಯವ್ಯಸನಿಗಳಿಂದ ಮದ್ಯಪಾನ ಚಟ ವಿಮುಕ್ತಿಗೆ ಕಾನೂನು ಜಾರಿಗಿಂತಲೂ ಹೃದಯ ಪರಿವರ್ತನೆ ಆಂದೋಲನವನ್ನು ಸಾಮಾಜಿಕ ಕಳಕಳಿಯುಳ್ಳ ಧರ್ಮಾಧಿಕಾರಿಗಳ ಸಹಕಾರದಲ್ಲಿ ಹಮ್ಮಿಕೊಳ್ಳುವ ಮೂಲಕ ಮದ್ಯಪಾನ ಮುಕ್ತ ಸಮಾಜ ಸ್ಥಾಪಿಸಲು ಪ್ರಯತ್ನಿಸುವುದಾಗಿ ಅವರು ಆಶ್ವಾಸನೆ ನೀಡಿದರು.
ಮದ್ಯಪಾನಕ್ಕೆ ಸಮಾಜ ಅಧಿಕೃತ ಮಾನ್ಯತೆ ನೀಡಿರುವ ಜೊತೆಗೆ ನಾಗರಿಕರು ಮದ್ಯಪಾನ ಮಾಡುವುದು ಘನತೆಯ ವಿಷಯವೆಂದು ಭಾವಿಸಿರುವುದರಿಂದ ಈ ಮಂಡಳಿಯ ಕೆಲಸವು ಪ್ರವಾಹಕ್ಕೆ ವಿರುದ್ಧವಾಗಿ ಈಜುವಂತಹ ಸಾಹಸವಾಗಿದೆ. ಆದ್ದರಿಂದ ಜನರಿಗೆ ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳ ಬಗೆ ಮಾಹಿತಿಯನ್ನು ನೀಡುವ ಸಲುವಾಗಿ ವಿವಿಧ ಇಲಾಖೆಗಳೊಡನೆ ಮುಖ್ಯವಾಗಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾವುದೆಂದರು.
ಪತ್ರಕರ್ತರು ಸಮಾಜಕ್ಕೆ ಸಲಹೆ ನೀಡುವವರಾಗಿರುವುದರಿಂದ ಅವರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವ ಮೂಲಕ ಪ್ರಚಾರಕ್ಕೆ ಆದ್ಯತೆ ನೀಡದೆ ಮದ್ಯಪಾನ ನಿರ್ಮೂಲನಕ್ಕಾಗಿ ಆಂದೋಲನವನ್ನು ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷರಾದ ಆನಂತ ಹೆಗಡೆ ಆಶೀಸರ, ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಬಿ.ಪಿ. ಪರಮೇಶ್, ಮಂಡಳಿ ಕಾರ್ಯದರ್ಶಿಗಳಾದ ಹೆಚ್.ಬಿ. ದಿನೇಶ್, ಹಿರಿಯ ಪತ್ರಕರ್ತರುಗಳಾದ ಹರಿಶ್ಚಂದ್ರ ಭಟ್, ರಾಮಯ್ಯ ಜಯಶೀಲರಾವ್, ಗರುಡನಗಿರಿ ನಾಗರಾಜ್, ವಿಶ್ವೇಶ್ವರ ಭಟ್, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರುಗಳಾದ ಎಂ. ಜಿ. ಕೆಳಗಡೆ ಹಾಗೂ ಕೆ.ಎಸ್. ಬೇವಿನಮರದ ಅವರು ಸೇರಿದಂತೆ ಹಲವು ಗಣ್ಯವಕ್ತಿಗಳು ಉಪಸ್ಥಿತರಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications