ಫೆ.28 ಎಂಪಿ ಪ್ರಕಾಶ್ ಅಭಿನಂದನಾ ಕಾರ್ಯಕ್ರಮ

ರಾಜ್ಯಪಾಲ ಹಂಸ್ ರಾಜ್ ಭಾರದ್ವಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅಧ್ಯಕ್ಷತೆ ವಹಿಸುವರು. ಮಾಜಿ ಪ್ರಧಾನಿ ದೇವೇಗೌಡ ಅಭಿನಂದನಾ ಕೃತಿ ಬಿಡುಗಡೆ ಮಾಡಲಿದ್ದಾರೆ. ಸಿ ಕೆ ಜಾಫರ್ ಷರೀಫ್, ವಿ ಶ್ರೀನಿವಾಸ್ ಪ್ರಸಾದ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಮೋಟಮ್ಮ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ ಕೆ ಶಿವಕಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ವೇದಿಕೆಯ ಅಧ್ಯಕ್ಷ ರವಿಶಂಕರ್ ತಿಳಿಸಿದ್ದಾರೆ.
ಸಮಾಜವಾದಿ ಸಿದ್ಧಾಂತದ ಮೂಲಕ ಹಿನ್ನೆಲೆಯಲ್ಲಿ ರಾಜಕೀಯ ಜೀವನ ಆರಂಭಿಸಿದ ಎಂಪಿ ಪ್ರಕಾಶ್ ಅವರು 1983ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿ ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದರು. ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.












Click it and Unblock the Notifications