ಕೆಂಪೇಗೌಡ ಬಡಾವಣೆ ಅಭಿವೃದ್ಧಿಗೆ ಪೂರಕ, ಭಾರದ್ವಾಜ್

ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಗುರುವಾರ ಮಾಡಿದ ಭಾಷಣದಲ್ಲಿ ಈ ವಿಷಯ ತಿಳಿಸಿದರು. ನೂತನ ಬಡಾವಣೆಗಳಲ್ಲಿ 1.74 ಲಕ್ಷ ಮನೆ, ನಿವೇಶನ ಹಂಚಿಕೆಗೆ ಬಿಡಿಎ ಕ್ರಮ ಕೈಗೊಳ್ಳಲಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸ ಲಾಗಿದೆ.
ಡಾ.ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಪ್ರಾರಂಭಿಕ ಅಧಿಸೂಚನೆ ಹೊರಡಿಸಲಾಗಿದೆ. ಕೆ.ಸಿ. ರೆಡ್ಡಿ , ದೇವರಾಜ ಅರಸು ಮತ್ತು ನಿಜಲಿಂಗಪ್ಪ ಬಡಾವಣೆಗಳ ಪ್ರಾರಂಭಿಕ ಅಧಿಸೂಚನೆಯನ್ನು ಸದ್ಯದಲ್ಲೇ ಹೊರಡಿಸಲಾಗುವುದು ಎಂದರು. ಬಿಜೆಪಿ ಅಧಿಕಾರಕ್ಕೆ ಬಂದಾಗ ಶೇ.0.1 ರಷ್ಟಿದ್ದ ಮೆಟ್ರೊ ಕಾಮಗಾರಿ ಪ್ರಗತಿ ಈಗ ಶೇ.22.4 ಆಗಿದೆ.
ಬೈಯಪ್ಪನಹಳ್ಳಿಯಿಂದ ಮಹಾತ್ಮ ಗಾಂಧಿ ರಸ್ತೆವರೆಗಿನ ಕಾಮಗಾರಿ ಶೇ.70ರಷ್ಟು ಮುಗಿದಿದೆ. ಡಿ.2010ರ ವೇಳೆಗೆ ಸಂಚಾರ ಆರಂಭಿಸಲು ಉದ್ದೇಶಿಸಲಾಗಿದೆ. ಯೋಜನೆಯ ಎಲ್ಲ ಮಾರ್ಗಗಳ ನಿರ್ಮಾಣವನ್ನು ಮಾ.2013ಕ್ಕೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಬಿಬಿಎಂಪಿ ಮೇಲಿನ ನಿರೀಕ್ಷಿತ ವೆಚ್ಚ 2009-10ನೇ ಸಾಲಿನಲ್ಲಿ 3,000 ಕೋಟಿ ರೂ ಹಾಗೂ ಬಿಡಿಎ ವೆಚ್ಚ 145ರಿಂದ 873 ಕೋಟಿ ರೂ.ಗೆ ಏರಿಕೆಯಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಆರ್ಟೀರಿ ಯಲ್, ಉಪ ಆರ್ಟೀರಿಯಲ್ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ವಿವರಿಸಿದರು.
ಸರಕಾರಿ ಜಮೀನಿನ ಅನಧಿಕೃತ ಒತ್ತುವರಿ ತಡೆಗೆ ಜಂಟಿ ಸದನ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕೆ ಕಾರ್ಯಪಡೆಯನ್ನು ರಚಿಸಲಾಗಿದೆ. ಕಾರ್ಯಪಡೆ ಇದುವರೆಗೆ 7.39 ಲಕ್ಷ ಎಕರೆ ಒತ್ತುವರಿ ಗುರುತಿಸಿದೆ. ಸರಕಾರಿ ಆಸ್ತಿಯ ರಕ್ಷಣೆಗೆ ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು. ವಿತ್ತೀಯ ನಿರ್ವಹಣೆಯಲ್ಲಿ ಶಿಸ್ತುಬದ್ಧ ರಾಜ್ಯ ಎಂಬ ಖ್ಯಾತಿ ಗಳಿಸಿದೆ. ಯೋಜನೆ ವೆಚ್ಚ ಹೆಚ್ಚುತ್ತಿದ್ದರೂ, ರಾಜಸ್ವ ಹೆಚ್ಚಳದ ದಾಖಲೆ ಕಾಪಾಡಿಕೊಳ್ಳಲಾಗಿದೆ. ವಿತ್ತೀಯ ಹೊಣೆಗಾರಿಕೆ ಅಧಿ
ನಿಯಮದಡಿ ರೂಪಿಸಿದ ಪರಿಮಿತಿಯೊಳಗೆ ಕೊರತೆಯನ್ನು ನಿರ್ವಹಿಸಲಾಗಿದೆ. ಮುಂದೆಯೂ ಇದೇ ಶಿಸ್ತು ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications