ಬಿಬಿಎಂಪಿ ಚುನಾವಣೆ ಮತ್ತೆ ಕಾಲಾವಕಾಶ ಕೋರಿಕೆ
ಬೆಂಗಳೂರು,
ಫೆ. 26 : ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ ಬಂದಿದೆ. ಮೇ 15ರ ವರೆಗೆ ಕಾಲಾವಕಾಶ ಕೋರಿ ಹೈಕೋರ್ಟ್ ಗೆ ರಾಜ್ಯ ಸರಕಾರ ಗುರುವಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. id="toptextpromo">ಬಿಬಿಎಂಪಿ
ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲೇ ಸಮಸ್ಯೆ ಪರಿಹಸಿಕೊಳ್ಳಿ ಎಂದು ಸುಪ್ರಿಂಕೋರ್ಟ್ ತಾಕೀತು ಮಾಡಿ ರಾಜ್ಯ ಸರಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ವಿಭಾಗೀಯ ಪೀಠ ನೀಡಿರುವ ಅದೇಶದ ಅನ್ವಯ ಮಾರ್ಚ್ 30ರೊಳಗೆ ಚುನಾವಣೆ ನಡೆಸಲು ಕಷ್ಟವಾಗುತ್ತದೆ. ನ್ಯಾಯಾಲಯದ ಆದೇಶವನ್ನು ಸರಕಾರ ಗೌರವಿಸುತ್ತದೆ. id='are-slot-1' class='oiad oi-axt oiadv'> id='top-searched-articles'>ಆದರೆ,
ಮಾರ್ಚ್ 1 ರಿಂದ 20ರವರೆಗೆ ಎಸ್ಎಸ್ಎಸ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತಿವೆ. ಸುಮಾರು 1 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದರಿಂದ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುತ್ತದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ.











Click it and Unblock the Notifications