ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸ್ ದರ ಏರಿಕೆ ಸಂಭವ: ಸಚಿವ ಅಶೋಕ್

By Mahesh
|
Google Oneindia Kannada News

R Ashok
ಬೆಂಗಳೂರು, ಫೆ. 27: ಕೆಎಸ್ಸಾಆರ್ ಟಿಸಿ, ಬಿಎಂಟಿಸಿ ಪ್ರಯಾಣದರ ಏರಿಕೆ ಕುರಿತು ಚಿಂತನೆ ನಡೆದಿದೆ. ಇಂದು ಸಂಜೆ ಸಾರಿಗೆ ಇಲಾಖೆ ಅಧಿಕಾರಿಗಳೊಡನೆ ಚರ್ಚೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಇಂಧನ ದರ ಏರಿಕೆಯಿಂದ ರಾಜ್ಯ ಸಾರಿಗೆ ಇಲಾಖೆ ಮೇಲೆ ಸುಮಾರು 200 ಕೋಟಿ ಹೊರೆ ಬೀಳುತ್ತದೆ.ದರ ಏರಿಕೆ ಬಗ್ಗೆ ಸಂಪೂರ್ಣವಾಗಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು. ಸಿಎಂ ಒಪ್ಪಿಗೆ ನೀಡಿದ ನಂತರ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಅಶೋಕ್ ಹೇಳಿದರು.

ಕೇಂದ್ರ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕನಿಷ್ಟ ಎಂದರೂ 3 ರಿಂದ 4 ರುಪಾಯಿ ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಪ್ರಕಟಿಸಲಾಗಿತ್ತು. ಇದರಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರ್ವಜನಿಕ ಸಾರಿಗೆ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಸಿಎಂ ಯಡಿಯೂರಪ್ಪ ಅವರ ಮುಂದಿಡಲಿದೆ. ಈಗ ಜನಸಾಮಾನ್ಯರ ಗಮನ ಹುಟ್ಟುಹಬ್ಬದ ಆಚರಣೆಯ ಸಂಭ್ರಮದಲ್ಲಿರುವ ಸಿಎಂ ಅವರ ನಿರ್ಧಾರದ ಮೇಲಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X