ಲಂಚ ಪ್ರಕರಣ : ಸಂಪಂಗಿಗೆ ಕ್ಲೀನ್ ಚಿಟ್

ಕೆಜಿಎಫ್ ನಲ್ಲಿ ಕಟ್ಟಡ ನಿರ್ಮಾಣ ವಿಷಯದಲ್ಲಿ ಅಯೂಬ್ ಹಾಗೂ ಫರೂಕ್ ಅವರಿಗೆ ವ್ಯಾಜ್ಯ ನಡೆದಿತ್ತು. ಒತ್ತಡಕ್ಕೆ ಒಳಗಾಗಿ ಅಯೂಬ್ ಅವರು ವಿಷ ಸೇವಿಸಿ ಆಸ್ಪತ್ರೆ ಸೇರಿಸಿದ್ದರು. ಇದರಿಂದ ಫರೂಕ್ ಅವರ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಕೇಸ್ ನಿಂದ ಬಚಾವಾಗಲು ಶಾಸಕರ ಸಹಾಯ ಬಯಸಿ, 5 ಲಕ್ಷ ನೀಡಲು ಮುಂದಾಗಿದ್ದರು. ಇಂದು 50 ಸಾವಿರ ರು ನಗದು ಹಾಗೂ 4.5 ಲಕ್ಷ ರು ಮೊತ್ತದ ಚೆಕ್ ಹಿಡಿದು ಕೊಂಡು ಶಾಸಕರ ಕಚೇರಿ ಹೊಕ್ಕ ಫರೂಕ್, ಶಾಸಕ ಸಂಪಂಗಿ ಅವರಿಗೆ ಲಂಚ ನೀಡುತ್ತಿದ್ದಾಗ ಲೋಕಾಯುಕ್ತರು ಶಾಸಕರನ್ನು ಬಲೆಯಲ್ಲಿ ಕೆಡವಿಕೊಂಡಿದ್ದರು.
ಶಾಸಕರ ಭವನದಲ್ಲೇ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಕೈಯಲ್ಲಿ ಶಾಸಕ ಸಂಪಂಗಿ ಸಿಕ್ಕಿಬಿದ್ದಿದ್ದರು. ಸಾರ್ವಜನಿಕವಾಗಿ ಸಂಪಂಗಿ ಲಂಚ ಪ್ರಕರಣ ವ್ಯಾಪಕ ಖಂಡನೆಗೆ ಗುರಿಯಾಗಿತ್ತು. ಪ್ರಕರಣದ ಸಮಗ್ರ ತನಿಖೆಗೆ ಕೆಜಿ ಭೂಪಯ್ಯ ನೇತೃತ್ವದ ಸದನ ಸಮಿತಿ ರಚಿಸಲಾಗಿತ್ತು. ಇಂದು ಸಮಿತಿಯು ಸರಕಾರಕ್ಕೆ ವರದಿ ಸಲ್ಲಿಸಿದ್ದು, ಸಂಪಂಗಿ ಅವರಿಗೆ ಕ್ಲಿನ್ ಚಿಟ್ ನೀಡಿ, ಫರೂಕ್ ಅವರನ್ನು ತಪ್ಪಿತಸ್ಥರನ್ನಾಗಿ ಮಾಡಿದೆ.
ಬಿಜೆಪಿ ಶಾಸಕರ ಲಂಚ ಪ್ರಕರಣವನ್ನು ಜೆಡಿಎಸ್, ಕಾಂಗ್ರೆಸ್ ಅಂದು ಬಲವಾಗಿ ಖಂಡಿಸಿದ್ದವು. ಆದರೆ, ಇಂದು ಸದನದಲ್ಲಿ ಈ ಬಗ್ಗೆಚರ್ಚೆ ನಡೆಯುವ ಸಾಧ್ಯತೆಯಿದ್ದು, ಪ್ರತಿಪಕ್ಷಗಳು ಯಾವ ನಿಲುವು ತೆಗೆದುಕೊಳ್ಳಲಿವೆ ಎನ್ನುವುದು ವಿಶೇಷವಾಗಿದೆ. ಪ್ರಕರಣದ ನಂತರ ಫರೂಕ್ ಗೆ ಜೀವ ಬೆದರಿಕೆಗಳು ಬಂದಿದ್ದವು. ಇದರಿಂದ ಅವರು ತಲೆಮರೆಸಿಕೊಂಡಿದ್ದು, ಸದ್ಯ ವಿದೇಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications