ತಮಿಳುನಾಡು ಹೊಸ ವಿಧಾನಸಭೆಗೆ ಯಡ್ಡಿ
ಬೆಂಗಳೂರು,
ಮಾ. 1: ಈ ತಿಂಗಳ 13 ರಂದು ಚೆನ್ನೈ ನಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಸಚಿವಾಲಯದ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ತಮಿಳುನಾಡು ವಾರ್ತಾ ಸಚಿವರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಆಹ್ವಾನ ನೀಡಿದ್ದಾರೆ. id="toptextpromo">ಸುದ್ದಿಗಾರರೊಂದಿಗೆ
ಮಾತನಾಡುತ್ತಿದ್ದ ಯಡಿಯೂರಪ್ಪ, ಈ ಸಮಾರಂಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಭಾಗವಹಿಸಲಿದ್ದು, ತಾವೂ ಸಹ ನೆರೆ ರಾಜ್ಯದ ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದರು. ಇದರಿಂದ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಇರುವ ಸಹೋದರ ಬಾಂಧವ್ಯ ಮತ್ತಷ್ಟು ವೃದ್ದಿಯಾಗುತ್ತದೆ ಎಂದು ಯಡ್ಡಿ ಅಭಿಪ್ರಾಯಪಟ್ಟರು. ಈ ಬಗ್ಗೆ ಎಂ. ಕರುಣಾನಿಧಿಯವರಿಗೆ ಪತ್ರ ಬರೆಯುತ್ತೇನೆ ಎಂದೂ ಹೇಳಿದರು. id='are-slot-1' class='oiad oi-axt oiadv'> id='top-searched-articles'>ಕರ್ನಾಟಕ
ವಿಧಾನಸಭೆಯ ಮೊಗಸಾಲೆಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ತಮಿಳುನಾಡು ವಾರ್ತಾ ಸಚಿವ ಇಳಂವಳಧಿ ಅವರು ಕರುಣಾನಿಧಿ ಕೊಟ್ಟಿದ್ದ ಆಹ್ವಾನ ಪತ್ರವನ್ನು ಕರ್ನಾಟಕ ಮುಖ್ಯಮಂತ್ರಿಗಳಿಗೆ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದರು.











Click it and Unblock the Notifications