ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಮಿಳುನಾಡು ಹೊಸ ವಿಧಾನಸಭೆಗೆ ಯಡ್ಡಿ
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಯಡಿಯೂರಪ್ಪ, ಈ ಸಮಾರಂಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಭಾಗವಹಿಸಲಿದ್ದು, ತಾವೂ ಸಹ ನೆರೆ ರಾಜ್ಯದ ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದರು. ಇದರಿಂದ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಇರುವ ಸಹೋದರ ಬಾಂಧವ್ಯ ಮತ್ತಷ್ಟು ವೃದ್ದಿಯಾಗುತ್ತದೆ ಎಂದು ಯಡ್ಡಿ ಅಭಿಪ್ರಾಯಪಟ್ಟರು. ಈ ಬಗ್ಗೆ ಎಂ. ಕರುಣಾನಿಧಿಯವರಿಗೆ ಪತ್ರ ಬರೆಯುತ್ತೇನೆ ಎಂದೂ ಹೇಳಿದರು.
ಕರ್ನಾಟಕ ವಿಧಾನಸಭೆಯ ಮೊಗಸಾಲೆಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ತಮಿಳುನಾಡು ವಾರ್ತಾ ಸಚಿವ ಇಳಂವಳಧಿ ಅವರು ಕರುಣಾನಿಧಿ ಕೊಟ್ಟಿದ್ದ ಆಹ್ವಾನ ಪತ್ರವನ್ನು ಕರ್ನಾಟಕ ಮುಖ್ಯಮಂತ್ರಿಗಳಿಗೆ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದರು.
Comments
Story first published: Monday, March 1, 2010, 18:15 [IST]