ಹಾಕಿ ತಂಡದ ದಿಗ್ವಿಜಯ, ಬಹುಮಾನಗಳ ಸುರಿಮಳೆ

ವಿಶ್ವಕಪ್ ಹಾಕಿಯಲ್ಲಿ ಆರಂಭಿಕ ಪಂದ್ಯವನ್ನು ಸಾಂಪ್ರದಾಯಕ ಎದುರಾಳಿ ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ ಭಾರತ ಹಾಕಿ ತಂಡದ ಸದಸ್ಯರಿಗೆ ಸಹರಾ ಇಂಡಿಯಾ ತಲಾ 2 ಲಕ್ಷ ಮತ್ತು ಭಾರತದ ಸರಕಾರ ತಲಾ 1 ಲಕ್ಷ ರುಪಾಯಿ ಬಹುಮಾನ ಘೋಷಿಸಿದೆ.
ವಿಡಿಯೋ: ಪಾಕ್ ತಂಡವನ್ನು ಬಗ್ಗು ಬಡಿದ ಹಾಕಿ ಇಂಡಿಯಾ
ಬಹು ನಿರೀಕ್ಷಿತ ಹೈವೋಲ್ಟೇಜ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಜ್ಪಾಲ್ ಸಿಂಗ್ ನೇತೃತ್ವದ ಭಾರತ ಸ್ಪೂರ್ತಿದಾಯಕ ಪ್ರದರ್ಶನ ನೀಡಿತು. ಭಾರತೀಯರ ಕೆಚ್ಚೆದೆ ದಾಳಿಗೆ ಪಾಕ್ ಕಕ್ಕಾಬಿಕ್ಕಿಯಾಗಿ ಸುಲಭವಾಗಿ ಶರಣಾಯಿತು. ಭಾರತದ ಪರ 27ನೇ ನಿಮಿಷದಲ್ಲಿ ಶಿವೇಂದ್ರ ಸಿಂಗ್, 35ನೇ ಮತ್ತು 57ನೇ ನಿಮಿಷದಲ್ಲಿ ಸಂದೀಪ್ ಸಿಂಗ್, 37ನೇ ನಿಮಿಷದಲ್ಲಿ ಪ್ರಭಜೋತ್ ಸಿಂಗ್ ಗೋಲು ಭಾರಿಸಿದರೆ ಪಾಕ್ ಪರ 59ನೇ ನಿಮಿಷದಲ್ಲಿ ಸೊಹೇಲ್ ಅಬ್ಬಾಸ್ ಏಕೈಕ ಗೋಲು ದಾಖಲಿಸಿದರು.
ಭಾನುವಾರ (ಫೆ 28 ) ನಡೆದ ಇತರ ಎರಡು ಪಂದ್ಯದಲ್ಲಿ ಸ್ಪೇನ್ ದಕ್ಷಿಣ ಆಫ್ರಿಕಾ ತಂಡವನ್ನು 4 -2 ಗೋಲುಗಳಿಂದ ಮಣಿಸಿದರೆ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ತಂಡವನ್ನು 3 -1 ಅಂತರದಿಂದ ಸೋಲಿಸಿತು. ಭಾರತ ತಂಡ ಮಾರ್ಚ್ 2ರಂದು ಆಸ್ಟ್ರೇಲಿಯಾ, ಮಾರ್ಚ್ 4ರಂದು ಸ್ಪೇನ್, ಮಾರ್ಚ್ 6ರಂದು ಇಂಗ್ಲೆಂಡ್, ಮಾರ್ಚ್ 8ರಂದು ದಕ್ಷಿಣ ಆಫ್ರಿಕಾ ವಿರುದ್ದ ತನ್ನಪಂದ್ಯವನ್ನಾದಲಿದೆ. ಮಾರ್ಚ್ 11ರಂದು ಸೆಮಿ ಫೈನಲ್ ಮತ್ತು ಮಾರ್ಚ್ 13ರಂದು ಫೈನಲ್ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯವು ಟೆನ್ ಸ್ಪೋರ್ಟ್ಸ್ ನಲ್ಲಿ ನೇರ ಪ್ರಸಾರಗೊಳ್ಳುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications