ಕೋಮು ಜ್ವಾಲೆಯಲ್ಲಿ ಬೆಂದ ಶಿವಮೊಗ್ಗ, ಹಾಸನ

ಶಿವಮೊಗ್ಗ ಮತ್ತು ಹಾಸನಗಳಲ್ಲಿ ಕಂಡಕಂಡಲ್ಲೆಲ್ಲ ಅಂಗಡಿ ಮುಂಗಟ್ಟುಗಳಿಗೆ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಲ್ಲು ತೂರಾಟವಾಗುತ್ತಿದೆ. ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಕಲ್ಲುತೂರಾಟದಿಂದ ಪೊಲೀಸರಿಗೆ ಮತ್ತು ಸಾರ್ವಜನಿಕರಿಗೆ ಗಾಯಗಳಾಗಿವೆ. ಪ್ರತಿಭಟನಾಕಾರರು ಪೊಲೀಸರ ಮೇಲೆಯೂ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಅಪರಾಧಿ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಅಡಿ ಕರ್ಫ್ಯೂ ಜಾರಿ ಮಾಡಲಾಗಿದ್ದರೂ ದೊಂಬಿ ಹತೋಟಿಗೆ ಬರುತ್ತಿಲ್ಲ. ಪ್ರತಿಭಟನಾಕಾರರು ಯಾರು, ಸಾರ್ವಜನಿಕರಾರು ಎಂಬುದನ್ನು ಲೆಕ್ಕಿಸದೆ ಲಾಠಿ ರುಚಿ ತೋರಿದ್ದರಿಂದ ಕೆಲ ಸಾರ್ವಜನಿಕರೂ ಗಾಯಗೊಂಡಿದ್ದಾರೆ.
ಗೋಲಿಬಾರ್: ಇತ್ತೀಚಿನ ವರದಿಗಳ ಪ್ರಕಾರ ಶಿವಮೊಗ್ಗದ ಎಂಸಿಕೆ ರಸ್ತೆಯಲ್ಲಿ ನಡೆಸಿದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದು, ನಾಲ್ವರು ಗಾಯಗೊಂಡಿದ್ದಾರೆ.
ಹಾಸನದಲ್ಲಿ ಬೈಕುಗಳು, ಅಟೋಗಳು, ಟ್ಯಾಕ್ಸಿಗಳಿಗೆ ಬೆಂಕಿ ಹಚ್ಚಲಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಮತ್ತು ಶಿವಮೂಗ್ಗದಲ್ಲಿ ಮೂರು ದಿನಗಳ ಕಾಲ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಕನ್ನಡಪ್ರಭ ದಿನಪತ್ರಿಕೆಯ ಭಾನುವಾರ ಸಂಚಿಕೆಯ ಸಾಪ್ತಾಹಿಕ ಪ್ರಭದಲ್ಲಿ ತಸ್ಲೀಮಾ ನಸ್ರೀನ್ ಅವರ ಲೇಖನವನ್ನು 'ಪರ್ದಾ ಹೈ ಪರ್ದಾ' ಎಂಬ ಶೀರ್ಷಕೆಯಡಿಯಲ್ಲಿ ಲೇಖನವನ್ನು ಪ್ರಕಟಿಸಲಾಗಿತ್ತು. ಬುರ್ಖಾಗೆ ಸಂಬಂಧಿಸಿದ ಲೇಖನ ಇದಾಗಿದ್ದು, ಬುರ್ಖಾ ಧರಿಸುವ ಮುಸ್ಲಿಂ ಮಹಿಳೆಯರು ಅನುಭವಿಸುತ್ತಿರುವ ಯಾತನೆಗೆ ಕನ್ನಡಿ ಹಿಡಿಯುವಂತಿರುವ ಲೇಖನ ಇದಾಗಿದೆ. ಇದನ್ನು ಪ್ರಕಟಿಸಿದ್ದಕ್ಕೆ ಆಕ್ರೋಶಗೊಂಡಿರುವ ಮುಸ್ಲಿಮರು ಪ್ರತಿಭಟನೆಗಿಳಿದಿದ್ದಾರೆ.
ಹಾಸನದ ಆಜಾದ್ ನಗರ, ಸುಭಾಶ್ ನಗರ ಮತ್ತು ಹಮೀದ್ ಮೊಹಲ್ಲಾ ಸೇರಿದಂತೆ ಒಂದು ಕೋಮಿಗೆ ಸೇರಿದ ಜನರು ವಾಸಿಸುವ ಬಡಾವಣೆಯಲ್ಲಿ ಹೆಚ್ಚಿನ ಪ್ರತಿಭಟನೆ ನಡೆದಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಬಸ್ಸುಗಳ ಮೇಲೆ ಕಲ್ಲು ಆರಂಭವಾಯಿತು. ಮುಂಜಾಗ್ರತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಶರತ್ ಚಂದ್ರ ಅವರು ಮೇಲುಸ್ತುವಾರಿ ವಹಿಸಿದ್ದು, ಸೂಕ್ಷ್ಮಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಒಂಬತ್ತು ಜನರು ಗಾಯಗೊಂಡಿದ್ದಾರೆ.
ಶಿವಮೊಗ್ಗದಲ್ಲೂ ನಿಷೇಧಾಜ್ಞೆ ಜಾರಿ
ಶಿವಮೊಗ್ಗದಲ್ಲಿಯೂ ಸುಮಾರು 16 ಬೈಕುಗಳಿಗೆ ಬೆಂಕಿ ಇಡಲಾಗಿದೆ. ಅಲ್ಲಿನ ಪರಿಸ್ಥಿತಿಯೂ ಕೈಮೀರತೊಡಗಿದ್ದು, ಮೂರು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಒಂದು ಕೋಮಿನ ಉದ್ರಿಕ್ತರ ಗುಂಪೊಂದು ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿದೆ. ಹಳ್ಳಿಗಳಿಂದ ಬಂದಿರುವ ಜನರಿಗೆ ಏನು ನಡೆಯುತ್ತಿದೆ ಎನ್ನುವುದೇ ತಿಳಿಯುತ್ತಿಲ್ಲ. ಒಟ್ಟಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಸೀಗೇಹಳ್ಳಿಯಲ್ಲಿ ದುಷ್ಕರ್ಮಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ನೆಹರೂ ರಸ್ತೆಯ ಬಟ್ಟೆ ಅಂಗಡಿಗೆ ಬೆಂಕಿ ಹಚ್ಚಲಾಗಿದೆ. ಗುಂಪು ಚೆದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಈವರೆಗೆ 15 ಮಂದಿ ಗಾಯಗೊಂಡಿದ್ದಾರೆ. ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆಗಳಾಗಿವೆ.
ಗೋಕಾಕ್ ನಲ್ಲಿ ಪ್ರಾರ್ಥನಾ ಮಂದಿರದ ಮೇಲೆ ಕಲ್ಲು
ಪ್ರಾರ್ಥನಾ ಮಂದಿರದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆಂದು ಒಂದು ಕೋಮಿನ ಗುಂಪೊಂದು ಪ್ರತಿಭಟನೆ ಆರಂಭಿಸಿ, ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಮತ್ತು ಬೈಕುಗಳಿಗೆ ಬೆಂಕಿ ಹಚ್ಚಿದ್ದಾರೆ. ಜನಜೀವನ ಮತ್ತು ಸಂಚಾರ ವ್ಯವಸ್ತೆ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ, ಪರಿಸ್ಥಿತಿ ಹತೋಟಿಗೆ ಬಂದಿದೆ. 25 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications