ಬುಧವಾರ ರಂಗಶಂಕರದಲ್ಲಿ ಜುಗಾರಿ ಕ್ರಾಸ್

ಸಮುದಾಯದ ಇತ್ತೀಚಿನ ಅತಿ ಜನಪ್ರಿಯ ನಾಟಕ " ಜುಗಾರಿ ಕ್ರಾಸ್" ಇದೇ ಮಾರ್ಚಿ 3 ನೇ ತಾರೀಖು ರಂಗ ಶಂಕರದಲ್ಲಿ ಸಂಜೆ 7.30 ಕ್ಕೆ ಪ್ರದರ್ಶನಗೊಳ್ಳುತ್ತಿದೆ. ಬನ್ನಿ ನಾಟಕ ನೋಡುವಿರಂತೆ.
ನಾಟಕದ ಬಗ್ಗೆ :
ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ ಈ ನಾಟಕ ಕೇವಲ 24 ಗಂಟೆಗಳಲ್ಲಿ ನಡೆಯುವ ಒಂದು ರೊಮ್ಯಾಂಟಿಕ್ ಥ್ರಿಲ್ಲರ್. ಜತೆಗೆ, ಇದು ನಿಜವಾಗಿಯೂ ಸಹ್ಯಾದ್ರಿಯ ಕಾಡುಗಳ ತಪ್ಪಲಿನಲ್ಲಿ ನಡೆಯಬಹುದಾದ ವಾಸ್ತವ ನೆಲೆಗಟ್ಟಿನ ಸಾಮಾಜಿಕ ಕಾದಂಬರಿ.
ಕಾಡಿನಲ್ಲಿರುವ ಲಕ್ಷಾಂತರ ಬೆಲೆಬಾಳುವ ಮರಗಳು ಮತ್ತಿತರ ನೈಸರ್ಗಿಕ ಸಂಪತ್ತು ಕಾಳ ದಂಧೆಗಳ ತವರೂರಾಗುವುದು, ಕಾಡಿನಿಂದ ಉತ್ಪತ್ತಿಯಾಗುವ ಕಾಳಧನ ದೇಶದ ರಾಜಕೀಯವನ್ನೇ ನಿಯಂತ್ರಿಸುವುದು, ಈ ಕಾಳ ವ್ಯವಹಾರಗಳ ಜೊತೆಜೊತೆಗೇ ಡ್ರಗ್ಸ್ ಮಾಫಿಯಾ ಜೂಜು ಸೇರಿ, ಅನೇಕ ವೇಳೆ ಇದ್ಯಾವುದಕ್ಕೂ ಸಂಬಂಧಿಸದ ಮುಗ್ಧರನ್ನೂ ಪ್ರಾಣಾಪಾಯದ ಅಂಚಿಗೆ ತಳ್ಳಬಹುದು ಎಂಬುದೇ ಈ ಕಥೆಯ ಹಿನ್ನೆಲೆ.
ಏಲಕ್ಕಿ ಬೆಳೆಗಾರ ಸುರೇಶ ಮತ್ತು ಅವನ ಹೆಂಡತಿ ಗೌರಿ ಏಲಕ್ಕಿ ವ್ಯಾಪಾರಕ್ಕೆಂದು ಪೇಟೆಗೆ ಬಂದವರು, ಅವರಿಗೇ ತಿಳಿಯದೇ ಕಳ್ಳ ದಂಧೆಗೆ ಸಿಕ್ಕಿಕೊಂಡು ಕ್ಷಣ ಕ್ಷಣಕ್ಕೂ ರೋಚಕವಾಗಿ ಸಾಗುವ, ಬೆಚ್ಚಿಬೀಳಿಸುವ ಅಂಡರ್ವರ್ಲ್ಡ್ನ ಕಥೆಯೊಂದಿಗೆ ಹೆಣೆದುಕೊಂಡಿರುವ ನಾಟಕವೇ ಜುಗಾರಿ ಕ್ರಾಸ್.
* ನಾಟಕ : ಜುಗಾರಿ ಕ್ರಾಸ್
* ರಚನೆ : ಕೆ. ಪೂರ್ಣಚಂದ್ರ ತೇಜಸ್ವಿ
* ನಾಟಕ ರೂಪ ಮತ್ತು ನಿರ್ದೇಶನ : ನಟರಾಜ್ ಹೊನ್ನವಳ್ಳಿ
* ಸಂಗೀತ : ಗಜಾನನ ಟಿ.ನಾಯ್ಕ
* ಸ್ಥಳ : ರಂಗಶಂಕರ
* ದಿನಾಂಕ/ವಾರ : 03.03.2010/ಬುಧವಾರ
* ಸಮಯ : ಸಂಜೆ 7.30
ಟಿಕೆಟ್ ಮತ್ತಿತರ ಮಾಹಿತಿಗಾಗಿ ಸಂಪರ್ಕ : ವೆಂಕಟೇಶ್ ಪ್ರಸಾದ್ : 99001 82400, 98807 31982
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications