ಶಿವಮೊಗ್ಗದಲ್ಲಿ ಮತ್ತೆ ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ

ಘಟನಾ ಸ್ಥಳಕ್ಕೆ ಇಂದು ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಸಂಭವಿಸಿದೆ. ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಲೇಖನವೊಂದಕ್ಕೆ ಒಂದು ಕೋಮಿನವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಗೋಲಿಬಾರ್ ನಡೆಸಲಾಗಿತ್ತು. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ನಂತರ ಭಾರಿ ಬಿಗಿ ಬಂದೋಬಸ್ತ್ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿತ್ತು.
ವಿಡಿಯೋ: ಕನ್ನಡ ಪತ್ರಿಕೆಗೆ ಲೇಖನ ಬರೆದಿಲ್ಲ: ತಸ್ಲೀಮಾ
ಈ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ನಾಳೆ ಬೆಳಗ್ಗೆ 6 ಗಂಟೆಗೆ ನಿಷೇಧಾಜ್ಞೆ ಮುಗಿಯುತ್ತಿತ್ತು. ಆನಂತರ ಉಭಯ ಸಮಾಜದ ಹಿರಿಯರ ಸಂಧಾನ ಸಭೆ ಕರೆಯಲು ಚಿಂತನೆ ನಡೆಸಲಾಗಿತ್ತು. ಈ ಎಲ್ಲ ಬೆಳವಣಿಗೆ ಮಧ್ಯೆಯೇ ಮತ್ತೆ ಗಲಭೆ ಉದ್ಬವಿಸಿದ್ದು, ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕದಳ ಬೆಂಕಿ ನಂದಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications