ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ : ಕಾಲ್ತುಳಿತಕ್ಕೆ 60 ಬಲಿ

By Mrutyunjaya Kalmat
|
Google Oneindia Kannada News

ಪ್ರತಾಪ್ ಗಢ್(ಉತ್ತರ ಪ್ರದೇಶ), ಮಾ. 4 : ಜಿಲ್ಲೆಯ ರಾಮ್ ಜಂಕಿ ದೇವಸ್ತಾನದಲ್ಲಿ ಸಂತ ಕೃಪಾಲು ಮಹಾರಾಜನಿಗೆ ಸಂಬಂಧಿಸಿದ ಕಾರ್ಯಕ್ರಮ ಏರ್ಪಡಿಸಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 60 ಮಂದಿ ಭಕ್ತಾಧಿಗಳು ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕೃಪಾಲು ಮಹಾರಾಜರ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿತಕ್ಕೆ 55-60 ಮಂದಿ ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿರುವ ಶಂಕಿಸಲಾಗಿದೆ. ಪರಿಹಾರ ಕಾರ್ಯ ಆರಂಭವಾಗಿದ್ದು, ಮೃತ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪರಿಹಾರ ಕಾರ್ಯ ಮುಂದುವರೆದಿದೆ. ಘಟನೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X