ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೋಹತ್ಯೆ ನಿಷೇಧ ವಿಧೇಯಕ ವಾಪಸ್
ವಿಧೇಯಕ ಹಿಂಪಡೆಯಲು ಸರಕಾರ ಯಾವುದೇ ಕಾರಣ ನೀಡಿಲ್ಲ. ಆದರೆ ಕರಡು ವಿಧೇಯಕದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಮರುಮಂಡಿಸಲು ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಪ್ರತಿಪಕ್ಷಗಳ ಒತ್ತಾಯದ ನಡುವೆಯೂ ಸಂಸದೀಯ ವ್ಯವಹಾರ ಮತ್ತು ಕಾನೂನು ಸಚಿವ ಸುರೇಶ ಕುಮಾರ್ ಸಮಜಾಯಿಷಿ ನೀಡದೆ 'ಕಾನೂನಿನಲ್ಲಿ ವಿಧೇಯಕವನ್ನು ಹಿಂದಕ್ಕೆ ಪಡೆಯಲು ಅವಕಾಶವಿದೆ' ಎಂದಷ್ಟೇ ಹೇಳಿದ್ದಾರೆ. ಸ್ಪೀಕರ್ ಕೂಡ ಸರಕಾರ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ವಿಧಾನಸಭೆಯಲ್ಲಿ ಚರ್ಚೆಗೆ ತೆರೆಎಳೆದಿದ್ದಾರೆ.
ಸದ್ಯ ಜಾರಿಯಲ್ಲಿರುವ ಕಾನೂನಿಂದ ಗೋರಕ್ಷಣೆ ಅಸಾಧ್ಯ ಇದಕ್ಕೆ ಕಟ್ಟುನಿಟ್ಟಿನ ಕಾನೂನು ಅಗತ್ಯ ಎಂದು ಸರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಮುಂದಾಗಿತ್ತು. ಆದರೆ ಅಲ್ಪಸಂಖ್ಯಾತರು, ದಲಿತರು, ರಾಜ್ಯ ರೈತಸಂಘ, ಪ್ರಗತಿಪರ ಸಂಘಟನೆಗಳು ಮತ್ತು ಪ್ರತಿಪಕ್ಷಗಳು ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
Story first published: Thursday, March 4, 2010, 10:20 [IST]