ಕಾರ್ ಬೈಕ್ ಸಿಗರೇಟ್ ಇನ್ನಷ್ಟು ದುಬಾರಿ

ಬೈಕ್ ಮತ್ತು ಕಾರುಗಳು ನೊಂದಣಿ ಶುಲ್ಕವನ್ನು ಹೆಚ್ಚಿಸಲಾಗಿದೆ. ಜೊತೆಗೆ ಲೈಫ್ ಟೈಮ್ ತೆರಿಗೆಯನ್ನು ಕೂಡ ಏರಿಸಲಾಗಿದೆ. ಸರಕು ವಾಹನ ಸಾಗಾಟ ತೆರಿಗೆಯಲ್ಲಿ ಏರಿಕೆ ಕಂಡುಬರಲಿದೆ. 3ರಿಂದ 5 ಟನ್ ವಾಹನಗಳಿಗೆ 20 ಸಾವಿರ ರು. ತೆರಿಗೆ ವಿಧಿಸಲಾಗಿದೆ. ಆಹಾರ ಧಾನ್ಯ, ಸಾಂಬಾರ್ ಪದಾರ್ಥಗಳ ತೆರಿಗೆಯನ್ನು ಇಳಿಸಿ ಬಡಜನತೆಯಲ್ಲಿ ಮುಗುಳ್ನಗೆ ತರಿಸಿದ್ದ ಯಡಿಯೂರಪ್ಪ ಸಾಗಾಟ ತೆರಿಗೆಯನ್ನು ಏರಿಸಿ ಅದೇ ಮುಗುಳ್ನಗುವನ್ನು ಕಸಿದುಕೊಂಡಿದ್ದಾರೆ.
5 ಲಕ್ಷ ರು.ಗಿಂತ ಕಡಿಮೆ ದರದ ವಾಹನಕ್ಕೆ ಶೇ.12 ತೆರಿಗೆ
5 ಲಕ್ಷ ರು.ಗಿಂತ ಮೇಲ್ಪಟ್ಟ ವಾಹನಕ್ಕೆ ಶೇ.13
10 ಲಕ್ಷ ರು.ಗಿಂತ ಮೇಲ್ಪಟ್ಟ ವಾಹನಕ್ಕೆ ಶೇ.14
20 ಲಕ್ಷ ರು.ವರೆಗಿನ ವಾಹನಕ್ಕೆ ಶೇ. 17
20 ಲಕ್ಷ ರು.ಗೂ ಮೇಲ್ಪಟ್ಟ ವಾಹನಗಳ ತೆರಿಗೆ ಶೇ.18ಕ್ಕೆ ಏರಿಸಲಾಗಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ನಾಲ್ಕು ಮತ್ತು ದ್ವಿಚಕ್ರ ವಾಹನಗಳ ಮಾರಾಟ, ನೊಂದಣಿ ಮತ್ತು ಸರಕು ಸಾಗಾಟ ತೆರಿಗೆ ಸಂಗ್ರಹದಿಂದ 249 ಕೋಟಿ ರು. ಹಣ ಸಂಗ್ರಹಿಸುವ ಗುರಿಯನ್ನು ರಾಜ್ಯ ಸರಕಾರ ಹೊಂದಿದೆ.
ವಿಲಾಸಿ ಹೊಟೇಲುಗಳು ಇನ್ನು ಶ್ರೀಮಂತರಿಗೆ ಮಾತ್ರ ಸೀಮಿತ. 1 ಸಾವಿರದಿಂದ 2 ಸಾವಿರದವರೆಗೆ ಬಾಡಿಗೆ ಇರುವ ಹೊಟೇಲುಗಳ ಮೇಲಿನ ತೆರಿಗೆಯನ್ು ಶೇ.6ರಿಂದ 8ಕ್ಕೆ ಏರಿಸಲಾಗಿದೆ. ಮತ್ತು 2 ಸಾವಿರಕ್ಕೂ ಮೇಲ್ಪಟ್ಟ ಬಾಡಿಗೆ ದರವಿರುವ ಹೊಟೇಲುಗಳ ಬಾಡಿಗೆ ತೆರಿಗೆಯನ್ನು ಶೇ.10ರಿಂದ 12ಕ್ಕೆ ಏರಿಸಲಾಗಿದೆ. ಇದರಿಂದಾಗಿ ವಿಲಾಸಿ ಹೊಟೇಲುಗಳ ದರಗಳು ಇನ್ನು ಮತ್ತಷ್ಟು ದುಬಾರಿಯಾಗಲಿವೆ.
ಸಿಗರೇಟು, ಬೀಡಿ, ಗುಟ್ಕಾಗಳು ಇನ್ನು ಮುಂದೆ ಮತ್ತಷ್ಟು ದುಬಾರಿಯಾಗಲಿವೆ. ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಶೇ. 12.5ರಿಂದ ಶೇ.15ಕ್ಕೆ ಏರಿಸಲಾಗಿದೆ. ಆದರೆ, ಶಾಲಾ ಮಕ್ಕಳ ಬೆನ್ನೇರುವ ಬ್ಯಾಗುಗಳ ಬೆಲೆಯನ್ನು ಶೇ.5ರಷ್ಟು ಇಳಿಸಲಾಗಿದೆ.
ಕರ್ನಾಟಕ ಬಜೆಟ್ 2010-11 ಮುಖ್ಯಾಂಶಗಳು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications