ಬಿಬಿಎಂಪಿ ಚುನಾವಣೆಗೆ ಮಾ 28 ರಂದು ಮತದಾನ

ಮಾರ್ಚ್ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಶನಿವಾರ ವೇಳಾಪಟ್ಟಿ ಬಿಡುಗಡೆಗೊಳಿಸುವುದು ಅನಿವಾರ್ಯವಾಗಿತ್ತು. ಅಂತೂ ಕೊನೆಗೂ ಮೂರುವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಚುನಾವಣೆಗೆ ಮುಹೂರ್ತ ನಿಗದಿಯಾದಂತಾಗಿದೆ.
ಸರ್ಕಾರದ ಮೇಲ್ಮನವಿ: ಇಷ್ಟಾದರೂ ಚುನಾವಣಾ ಪ್ರಕ್ರಿಯೆ ಮುಗಿಸಲು 18ದಿನಗಳ ಕಾಲಾವಕಾಶ ಕೋರಿ ಮತ್ತೊಮ್ಮೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದು ಅಡ್ವೋಕೆಟ್ ಜನರಲ್ ಅಶೋಕ್ ಹಾರ್ನಳ್ಳಿ ಹೇಳಿದರು..ಏಪ್ರಿಲ್ ಒಂದರಿಂದ 18ರವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆ ನಡೆಸುವುದರಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಅಲ್ಲದೇ, ಈ ಸಂದರ್ಭದಲ್ಲಿ ಚುನಾವಣೆ ನಡೆಸದಂತೆ ಪೋಷಕರಿಂದ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾಲಾವಕಾಶ ಕೋರಿರುವುದಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.
ಮೀಸಲಾತಿ ಪ್ರಶ್ನಿಸಿ ಅರ್ಜಿ: ಬಿಬಿಎಂಪಿ ಮೀಸಲಾತಿ ಪಟ್ಟಿಯಲ್ಲಿ ಲೋಪದೋಷಗಳಿವೆ ಎಂದು ಆರೋಪಿಸಿ ಶ್ಯಾಮಸುಂದರ ಎಂಬುವವರು ಕೋರ್ಟ್ಗೆ ರಿಟ್ ಸಲ್ಲಿಸಿದ್ದಾರೆ. ವಿಜನಾಪುರ, ಬಸವಪುರ ವಾರ್ಡ್ಗಳ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ವಾರ್ಡ್ ಗಳ ಮರುವಿಂಗಡಣೆ, ಮೀಸಲಾತಿ ನೆಪದ ನಂತರ ಸರ್ಕಾರ ಈ ಬಾರಿ ಪರೀಕ್ಷೆಯ ನೆಪವೊಡ್ಡಿದೆ. ಎರಡೂ ಅರ್ಜಿಗಳು ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಗಳಿವೆ.
ಬಿಬಿಎಂಪಿ ಚುನಾವಣೆ ವೇಳಾಪಟ್ಟಿ ವಿವರ:
ಒಟ್ಟು 198 ವಾರ್ಡ್ ಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಸಂಬಂಧಿತ ದೂರು ದಾಖಲಿಸಲು 6 ಕಂಟ್ರೋಲ್ ರೂಂ ಗಳನ್ನು ಸ್ಥಾಪಿಸಲಾಗಿದೆ. ನಾಳೆಯಿಂದ ಕಂಟ್ರೋಲ್ ರೂಂ ಆರಂಭ. ಒಟ್ಟು 6617 ಲಕ್ಷ ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ಹೇಳುತ್ತದೆ. ಚುನಾವಣಾ ಸಂದರ್ಭದಲ್ಲಿನ ಪ್ರಮುಖ ದಿನಾಂಕಗಳು ಇಂತಿವೆ.
ಮಾ.7: ಚುನಾವಣಾ ಅಧಿಸೂಚನೆ ಹಾಗೂ ನೀತಿ ಸಂಹಿತೆ ಜಾರಿ.
ಮಾ.8: ನಾಮಪತ್ರ ಸಲ್ಲಿಕೆ ಆರಂಭ.
ಮಾ. 15 :ನಾಮಪತ್ರ ಸಲ್ಲಿಕೆಗೆ ಕೊನೆ ದಿನ.
ಮಾ.17: ನಾಮಪತ್ರ ಪರಿಶೀಲನೆ.
ಮಾ.19: ನಾಮಪತ್ರ ಹಿಂಪೆಡೆಯಲು ಕೊನೆದಿನ.
ಮಾ.28 ರಂದು ಚುನಾವಣೆ
ಏ.4: ಮರು ಮತದಾನಕ್ಕೆ ಅವಕಾಶ
ಏ.5. ಫಲಿತಾಂಶ( ಬೆಳಗ್ಗೆ 8 ರಿಂದ)
ಏ.6 : ಚುನಾವಣಾ ಪ್ರಕ್ರಿಯೆ ಅಂತ್ಯ
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications