ಸದನದಲ್ಲಿ ಯಾದವರ ವ್ಯರ್ಥ ಕದನ

Lalu Mulayam Singh Yadav
ನವದೆಹಲಿ, ಮಾ. 11 : ವಿರೋಧದ ನಡುವೆ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ಪಡೆದ ಸರಕಾರದ ಕ್ರಮ ಖಂಡಿಸಿ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಚಿಂತನೆ ನಡೆಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಎಸ್ಪಿ ಮುಖಂಡ ಮುಲಾಯಂಸಿಂಗ್ ಯಾದವ್ ಬುಧವಾರ ಸಂಖ್ಯಾಬಲದ ಕೊರತೆ ನೆಪವೂಡ್ಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಮೇಲ್ಮನೆಯಲ್ಲಿ ಪಕ್ಷ ಸದಸ್ಯರನ್ನು ಮಾರ್ಷಲ್ ಮೂಲಕ ಹೊರಹಾಕಿದ್ದರಿಂದ ಯಾದವದ್ವಯರು ಅಸಮಾಧಾನಗೊಂಡಿದ್ದರು. ಸರಕಾರಕ್ಕೆ ಬೆಂಬಲ ಹಿಂತೆಗೆದುಕೊಂಡ ಬೆನ್ನಲ್ಲೇ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಹೇಳಿದ್ದರು. ಸಂವಿಧಾನದ ನಿಯಮಗಳ ಪ್ರಕಾರ ಅವಿಶ್ವಾಸ ಗೊತ್ತುವಳಿಗೆ ಕನಿಷ್ಠ 50 ಸದಸ್ಯರು ಸಹಿ ಹಾಕಬೇಕು. ಪ್ರಸ್ತುತ ಆರ್ ಜೆಡಿ ಹಾಗೂ ಎಸ್ಪಿ ಅಷ್ಟು ಸಂಖ್ಯಾಬಲ ಹೊಂದಿಲ್ಲ. ಇತರ ಪಕ್ಷಗಳಿಂದಲೂ ಬೆಂಬಲ ದೊರಕುವ ನಿರೀಕ್ಷೆ ಇಲ್ಲ. ಯುಪಿಎ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಲ ಇನ್ನೂ ಪಕ್ವವಾಗಿಲ್ಲ ಎಂದು ಬಿಜೆಪಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+