ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಅನುಷ್ಠಾನ ಶೀಘ್ರ?

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡುತ್ತಿದ್ದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೇತೃತ್ವದಲ್ಲಿ ನಾಡಿನ ಕನ್ನಡಪರ ಸಂಘಟನೆಗಳ ಮತ್ತು ಹಿರಿಯ ವಿದ್ವಾಂಸರ ನಿಯೋಗವೊಂದು ಇತ್ತೀಚೆಗೆ ದೆಹಲಿಗೆ ತೆರಳಿ, ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಮುಖ್ಯ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರನ್ನು ಹಾಗೂ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಸುದೀರ್ಘವಾಗಿ ಚರ್ಚಿಸಿದ್ದು, ಈ ನಿಟ್ಟಿನಲ್ಲಿ ಗುಣಾತ್ಮಕ ಭರವಸೆ ಕೇಂದ್ರದಿಂದ ದೊರೆತಿದೆ ಎಂದರು.
ಹುಬ್ಬಳ್ಳಿ ಮತ್ತು ಧಾರವಾಡ ನಗರಗಳ ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವುದಾಗಿ ಜಲಸಂಪನ್ಮೂಲ ಸಚಿವರು ಭರವಸೆ ನೀಡಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಹಾಗೂ ಸ್ಥಳೀಯ ಭಾಷೆಗೆ ಆದ್ಯತೆ ನೀಡುವ ನಮ್ಮ ಮನವಿಗೆ ಕೇಂದ್ರ ಕಾರ್ಮಿಕ ಸಚಿವರು ತಾತ್ವಿಕವಾಗಿ ಸಮ್ಮತಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಎನ್ಎಸ್ಡಿಗೆ ಸ್ವಾಯತ್ತತೆ ನೀಡುವ ಬೇಡಿಕೆಯ ಹಿಂದಿರುವ ಕಳಕಳಿಯನ್ನು ತಾವು ಗೌರವಿಸಿ, ಅಗತ್ಯವಿರುವ ಕ್ರಮಕೈಗೊಳ್ಳುವ ಭರವಸೆಯನ್ನು ಕನ್ನಡ ಸಂಸ್ಕೃತಿ ಕಾರ್ಯದರ್ಶಿಗಳು ನೀಡಿದ್ದಾರೆ ಎಂದು ಅವರು ಹೇಳಿದರು.
ಭಾರತ ಸರ್ಕಾರ ರೂಪಿಸಿರುವ ಹೊಸ ಶಿಕ್ಷಣ ಕಾನೂನು ಜಾರಿಗೆ ಬಂದಿದ್ದು, ಅದು ಬರುವ ಏಪ್ರಿಲ್ 1ರಿಂದ ಅನ್ವಯವಾಗಲಿದೆ ಎಂದು ಮಾನವ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದು, 1ರಿಂದ 8ನೇ ತರಗತಿಯವರೆಗೆ ಶಿಕ್ಷಣವು ಮಗುವಿನ ಮಾತೃಭಾಷೆಯಲ್ಲೇ ಇರಬೇಕೆಂದಿದೆ. ಮಾತೃಭಾಷಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗ ಎದುರಾಗಿರುವ ಕಾನೂನು ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬಹುದು. ಇದಕ್ಕೆ ಸಹಾಯ ನೀಡಲು ನಾವು ಸಿದ್ಧ ಎಂದು ಕಾರ್ಯದರ್ಶಿಗಳು ಈ ಸಂದರ್ಭ ತಿಳಿಸಿದರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications