ಶೀಘ್ರ ದತ್ತಪೀಠ ದೇವಾಲಯ ಜೀರ್ಣೋದ್ಧಾರ: ರವಿ

Datta Peetha cave repair work soon
ಬೆಂಗಳೂರು, ಮಾ.13: ಬಾಬಾಬುಡನ್ ಗಿರಿ/ ದತ್ತಪೀಠದ ಗುಹಾಂತರ ದೇವಾಲಯ ಜೀರ್ಣೋದ್ಧಾರ ಕೆಲಸಕ್ಕೆ ಸುಪ್ರೀಂಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ಗುಹಾಂತರ ದೇವಾಲಯದ ಜೀರ್ಣೋದ್ಧಾರ ಕಾರ್ಯ ಆರಂಭವಾಗಲಿದೆ ಎಂದು ಭಾರತೀಯ ಜನತಾ ಪಕ್ಷದ ವಕ್ತಾರ ಹಾಗೂ ಶಾಸಕ ಸಿಟಿ ರವಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯ ಸರಕಾರದ ಪುರಾತತ್ವ ಇಲಾಖೆಯ ಮಾರ್ಗದರ್ಶನದಲ್ಲಿ ಮೂಲ ದೇವಾಲಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ದೇವಾಲಯ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದು ತಿಳಿಸಿದರು.

2008ರಲ್ಲಿ ಬಿದ್ದ ಭಾರಿ ಮಳೆಗೆ ದೇವಾಲಯ ಶಿಥಿಲಗೊಂಡಿತ್ತು. ಆಲಯದ ಜೀರ್ಣೋದ್ಧಾರ ಕೆಲಸಕ್ಕೆ ಮುಜರಾಯಿ ಇಲಾಖೆ ರು.5 ಕೋಟಿ ಬಿಡುಗಡೆ ಮಾಡಿದೆ. ಬಾಬಾಬುಡನ್ ಗಿರಿಯನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಸಚಿವ ಜಿ ಜನಾರ್ಧನರೆಡ್ಡಿ ರು.5 ಕೋಟಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. 2013ಕ್ಕ್ಕೆ ಆಲಯ ಜೀರ್ಣೋದ್ಧಾರ ಮುಗಿಯಲಿದೆ ಎಂದು ರವಿ ವಿವರ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+