ಶೀಘ್ರ ದತ್ತಪೀಠ ದೇವಾಲಯ ಜೀರ್ಣೋದ್ಧಾರ: ರವಿ

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯ ಸರಕಾರದ ಪುರಾತತ್ವ ಇಲಾಖೆಯ ಮಾರ್ಗದರ್ಶನದಲ್ಲಿ ಮೂಲ ದೇವಾಲಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ದೇವಾಲಯ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ ಎಂದು ತಿಳಿಸಿದರು.
2008ರಲ್ಲಿ ಬಿದ್ದ ಭಾರಿ ಮಳೆಗೆ ದೇವಾಲಯ ಶಿಥಿಲಗೊಂಡಿತ್ತು. ಆಲಯದ ಜೀರ್ಣೋದ್ಧಾರ ಕೆಲಸಕ್ಕೆ ಮುಜರಾಯಿ ಇಲಾಖೆ ರು.5 ಕೋಟಿ ಬಿಡುಗಡೆ ಮಾಡಿದೆ. ಬಾಬಾಬುಡನ್ ಗಿರಿಯನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಸಚಿವ ಜಿ ಜನಾರ್ಧನರೆಡ್ಡಿ ರು.5 ಕೋಟಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. 2013ಕ್ಕ್ಕೆ ಆಲಯ ಜೀರ್ಣೋದ್ಧಾರ ಮುಗಿಯಲಿದೆ ಎಂದು ರವಿ ವಿವರ ನೀಡಿದರು.












Click it and Unblock the Notifications